ರಾಜ್ಯ

ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ

ಬೆಂಗಳೂರು prajakiran.com :
ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಉಸ್ತುವಾರಿ ಅರುಣಸಿಂಗ್ ಸ್ಪಷ್ಟವಾಗಿ ಹೇಳಿದರು.

ಅವರು ಪಕ್ಷದ ಕಚೇರಿಯಲ್ಲಿ ಸಚಿವರ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯ ಸರ್ಕಾರ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದೆ.

ನಾಯಕತ್ವ ಕುರಿತು ಯಾರೂ ಬಹಿರಂಗವಾಗಿ ಹೇಳಿಕೆ ನೀಡಬಾರದು ಎಂದು ಹೇಳಲಾಗಿದೆ.
ಇದರಿಂದಾಗಿ ಪಕ್ಷಕ್ಕೆ ಹೊಡೆತ ಬೀಳಲಿದೆ ಎಂದು ತಿಳಿಸಲಾಗಿದೆ ಎಂದು ಹೇಳಿದರು ‌

ಪಕ್ಷ ಸಂಘಟನೆ ಕುರಿತು ಚರ್ಚಿಸಲಾಗಿದೆ. ರಾಜ್ಯದ ಅನೇಕ ಮಹತ್ವಾಕಾಂಕ್ಷೆಯ ಯೋಜನೆಯನ್ನು ಜನರಿಗೆ ತಲುಪಿಸಲು ಶ್ರಮಿಸಬೇಕು

ಹಾಗೂ ಪ್ರತಿ ಗುರುವಾರ ಸಚಿವರು, ಶಾಸಕರು ಯಾವುದೇ ಪೂರ್ವಯೋಜಿತ ಸಮಯವಿಲ್ಲದೆ ಕಾರ್ಯಕರ್ತರಿಗೆ ಭೇಟಿಯಾಗಲು ಅವಕಾಶ ನೀಡಬೇಕು ಎಂದು ಸೂಚಿಸಲಾಗಿದೆ ಎಂದು ಹೇಳಿದರು.

ಪದೇ ಪದೇ ಈ ವಿಷಯ ಕುರಿತು ಕೇಳುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಅರುಣ್ ಸಿಂಗ್ ಸ್ಪಷ್ಟ ಪಡಿಸಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *