amit sha and bsy
ಅಂತಾರಾಷ್ಟ್ರೀಯ

ಸಿಎಂ ಸ್ಥಾನದಲ್ಲಿ ಯಡಿಯೂರಪ್ಪ ಬಹಳ ದಿನ ಉಳಿಯಲ್ಲ ಎಂದ ಬಿಜೆಪಿ ಶಾಸಕ

ವಿಜಯಪುರ prajakiran.com : ರಾಜ್ಯದ
ಸಿಎಂ ಸ್ಥಾನದಲ್ಲಿ ಬಿ.ಎಸ್. ಯಡಿಯೂರಪ್ಪ ಬಹಳ ದಿನ ಉಳಿಯಲ್ಲ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಅವರು ಮಂಗಳವಾರ ವಿಜಯಪುರ ನಗರದಲ್ಲಿ ನಡೆದ ಕಾರ್ಯಕ್ರಮ ವೊಂದರಲ್ಲಿ ಈ ವಿವಾದಾತ್ಮಕ ಹೇಳಿಕೆಯನ್ನು ನೀಡಿದರು.

ಮೇಲಿನವರಿಗೂ (ರಾಷ್ಟ್ರೀಯ ಬಿಜೆಪಿ ಹೈಕಮಾಂಡ್ ) ಸಾಕಾಗಿ ಹೋಗಿದ್ದಾರೆ.
ಹೀಗಾಗಿ ಅವರು ಇನ್ನೂ ಸ್ವಲ್ಪ ದಿನಗಳಲ್ಲಿ ಸಿಎಂ ಕುರ್ಚಿಯಿಂದ ಹೊರಬೀಳಲಿದ್ದಾರೆ ಎಂದು ಬಹಿರಂಗವಾಗಿ ಗುಡುಗಿದ್ದಾರೆ.

ಇದು ರಾಜ್ಯದ ಬಿಜೆಪಿ ವಲಯದಲ್ಲಿ ಮಿಂಚಿನ ಸಂಚಲನ ಸೃಷ್ಟಿಸಿದ್ದು, ಹೇಳಿಕೆ ಪರ ವಿರೋಧ ಚರ್ಚೆ ಹುಟ್ಟು ಹಾಕಿದೆ.

ಅವರ ಹೇಳಿಕೆ ಹಿಂದೆ ರಾಜ್ಯ ಬಿಜೆಪಿ ಯಲ್ಲಿ ಎಲ್ಲವೂ ಸರಿಯಿಲ್ಲ. ಎಲ್ಲೋ, ಎನೋ ಮಸಲತ್ತು ನಡೆದಿರುವುದು ಮಾತ್ರ ಸತ್ಯ ಎಂಬುದು ಸ್ಪಷ್ಟವಾಗಿ ಕಾಣಬಹುದು.

ಬಸವನಗೌಡ ಪಾಟೀಲ ಯತ್ನಾಳ ಬಗ್ಗೆ ನನಗೆ ಏನು ಗೊತ್ತಿಲ್ಲ
ಹುಬ್ಬಳ್ಳಿ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕುರಿತು ಶಾಸಕ ಬಸವನಗೌಡ ಪಾಟೀಲ ಯತ್ನಾಳ
ಹೇಳಿಕೆ ನೀಡಿರುವುದು ನನಗೆ ಗೊತ್ತಿಲ್ಲ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ನುಣುಚಿಕೊಂಡರು.

ಸಿಎಂ ಯಡಿಯೂರಪ್ಪ ಕುರಿತು ಶಾಸಕ ಬಸವನಗೌಡ ಯತ್ನಾಳ ಹೊಸ ಬಾಂಬ್ ಸಿಡಿಸಿದ ಹಿನ್ನೆಲೆಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ನನಗೆ ಗೊತ್ತಿಲ್ಲ.

ಯತ್ನಾಳ ಅವರ ಸ್ಟೇಟ್ ಮೆಂಟ್ ನಾನು ನೋಡಿಲ್ಲ. ಎಂದು ಶೆಟ್ಟರ್ ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕಿದರು.

ಇದೇ ವೇಳೆ ಯಡಿಯೂರಪ್ಪ ಅವರನ್ನು ಸಿಎಂ ಕುರ್ಚಿಯಿಂದ ಇಳಿಸಲು ಪ್ರಯತ್ನ ನಡೆದಿರುವುದು ಸತ್ಯ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು.

ಆದರೆ ಯಾರನ್ನು ಆಸ್ಥಾನಕ್ಕೆ ತಂದು ಕೂರಿಸುತ್ತಾರೆ ಎಂಬುದು ನನಗೆ ಗೊತ್ತಿಲ್ಲ ಎಂದು ಹೇಳಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *