ಬೆಂಗಳೂರು prajakiran.com : ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೊರೋನಾ ನಿಯಂತ್ರಣಕ್ಕೆ ಬಾರದ ಕಾರಣ ಎಂಟು ಜಿಲ್ಲೆಗಳಲ್ಲಿ ಲಾಕ್ಡೌನ್ ಮುಂದುವರಿಸಲು ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಇಂದು ಜಿಲ್ಲಾಡಳಿತ ಡಿಸಿಗಳ ಜೊತೆ ಸಿಎಂ ಸಭೆ ನಡೆಸಿದ್ದು
ಮೈಸೂರು, ಶಿವಮೊಗ್ಗ, ತುಮಕೂರು, ಹಾಸನ, ಮಂಡ್ಯ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗಳಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಬಾರದಿರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ.
ಈ ಜಿಲ್ಲೆಗಳಲ್ಲಿ ಜೂನ್.14ರ ನಂತರವೂ ಒಂದು ವಾರ ಲಾಕ್ಡೌನ್ ಜಾರಿಯಲ್ಲಿ ಇರಲಿದೆ. ಈ ಜಿಲ್ಲೆಗಳಲ್ಲಿ ಕೋವಿಡ್ ನಿಯಮ ಉಲ್ಲಂಘಿಸದಂತೆ ನೋಡಿಕೊಳ್ಳಿ, ಹಾಗೂ ವಿನಾಯಿತಿಗಳ ಬಗ್ಗೆ ನೀವೇ ಚರ್ಚೆ ಮಾಡಿ ತಿಳಿಸಿ’ ಎಂದು ಬಿಎಸ್ವೈ ಆದೇಶಿಸಿದ್ದಾರೆ.