ರಾಜ್ಯ

ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ ಪಡೆದುಕೊಂಡಿರುವುದರಲ್ಲಿ ರಾಜ್ಯ ಸರ್ಕಾರದ ಹಸ್ತಕ್ಷೇಪವಿಲ್ಲ ಎಂದ ಸಿಎಂ

ಬೆಂಗಳೂರು  prajakiran.com : ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿಯವರನ್ನು ಸಿಬಿಐ ವಶಕ್ಕೆ ಪಡೆದುಕೊಂಡಿರುವುದರಲ್ಲಿ ರಾಜ್ಯ ಸರ್ಕಾರದ ಹಸ್ತಕ್ಷೇಪವಿಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಅವರು ಗುರುವಾರ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಆರೋಪಗಳಲ್ಲಿ ಯಾವುದೇ ಸತ್ಯವಿಲ್ಲ. ರಾಜ್ಯ ಸರ್ಕಾರ ಯಾವುದೇ ರೀತಿಯ ಹಸ್ತಕ್ಷೇಪವನ್ನೂ ಮಾಡಿಲ್ಲ ಎಂದು ತಿರುಗೇಟು ನೀಡಿದರು.

ಮಾಜಿ ಸಚಿವ ವಿನಯ್ ಕುಲಕರ್ಣಿ ವಿರುದ್ಧ ಈ ಹಿಂದೆ ಹಲವು ಆರೋಪಗಳು ಕೇಳಿ ಬಂದಿದ್ದವು. ಈ ಸಂಬಂಧ ಸಿಬಿಐಗೆ ಸಾಕ್ಷ್ಯಾಧಾರಗಳು ದೊರಕಿರಬಹುದು. ಹೀಗಾಗಿಯೇ ಅವರು ವಶಕ್ಕೆ ಪಡೆದಿರಬಹುದು ಎಂದಿದ್ದಾರೆ.

ಅಲ್ಲದೆ, ಯೋಗೇಶ್ ಗೌಡ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂಬುದು ಎಲ್ಲರ ಆಪೇಕ್ಷೆಯಾಗಿತ್ತು. ಅದಕ್ಕೆ ನಾನೇ ಸಿಎಂ ಆದ ಬಳಿಕಅದನ್ನು ಸಿಬಿಐ ತನಿಖೆಗೆ ಒಪ್ಪಿಸಿದೆ. ಈಗಲಾದರೂ ಅವರ ಕುಟುಂಬಕ್ಕೆ ನ್ಯಾಯ ಸಿಗಲಿದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ನಾನು ಕೂಡ ಈ ಹಿಂದೆ ಅವರ ಕುಟುಂಬದವರಅಳಲನ್ನು ಆಲಿಸಿದ್ದೇನೆ. ಯೋಗೇಶ್ ಗೌಡ ಕುಟುಂಬಸ್ಥರು ಈಗಾಗಲೇ ಸಾಕಷ್ಟು ನೋವು ಅನುಭವಿಸಿದ್ದಾರೆ‌. ಇದೀಗ ಸಿಬಿಐ ತನಿಖೆಯಿಂದ ಕೊಲೆ ರಹಸ್ಯ ಬಯಲಾಗಲಿದೆ.

ಈ ತನಿಖೆಯಿಂದ ಸತ್ಯ ಹೊರಬಂದು, ಯೋಗೇಶ್ ಕುಟುಂಸ್ಥರಿಗೆ ನ್ಯಾಯ ದೊರಕುತ್ತದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಸಿಎಂ ಬಿ.ಎಸ್.ವೈ ಹೇಳಿದರು

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *