ಬೆಂಗಳೂರು prajakiran. com : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಕೋವಿಡ್ ಸಾಂಕ್ರಾಮಿಕಕ್ಕೆ ಸಂಬಂಧಿಸಿದಂತೆ ಪರಿಶೀಲನಾ ಸಭೆ ನಡೆಯಿತು.
ಸಿಎಂ ಬಸವರಾಜ ಬೊಮ್ಮಾಯಿ ಸಭೆಗೆ ನೀಡಿರುವ ಸೂಚನೆಗಳು:
1. ವಿಶ್ವದ ವಿವಿಧ ದೇಶಗಳಲ್ಲಿನ ಕೋವಿಡ್ ಸಾಂಕ್ರಾಮಿಕದ ಅಂಕಿ ಅಂಶಗಳ ಬಗ್ಗೆ ಸಮಗ್ರವಾಗಿ ಮಾಹಿತಿ ಪಡೆಯಲಾಯಿತು
_2 ಮಾಸ್ಕ್ ಹಾಕಿಕೊಳ್ಳುವುದು ಕಡ್ಡಾಯ
3 ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು
4 ಪ್ರಕರಣಗಳ ಸಂಖ್ಯೆಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುವುದು.
5. ಸಾರ್ವಜನಿಕರು ಲಸಿಕೆ ಹಾಕಿಸಿಕೊಳ್ಳುವುದನ್ನು ಹೆಚ್ವಿಸಲು ಪ್ರಚಾರ, ಮಾಹಿತಿ, ಶಿಕ್ಷಣ ಕಾರ್ಯಕ್ರಮವನ್ನು
ತೀವ್ರಗೊಳಿಸುವುದು
6. ಪ್ರಕರಣಗಳ ಸಂಖ್ಯೆ ಹೆಚ್ಚಿರುವ ಜಪಾನ್ ಮತ್ತು ಥೈಲ್ಯಾಂಡ್ ನಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರಿಗೆ ಟೆಲಿ ಮಾನಿಟರಿಂಗ್ ಕೈಗೊಳ್ಳುವುದು ಎಂದು ಸೂಚಿಸಿದರು.