ರಾಜ್ಯ

ಸಿಎಂ ಬಿ.ಎಸ್.ಯಡಿಯೂರಪ್ಪಗೆ ಕರೋನಾ ಪಾಸಿಟಿವ್ …..!

ಬೆಂಗಳೂರು prajakiran.com : ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮತ ಬೇಟೆಗೆ ಬಂದಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಜ್ವರದ ಹಿನ್ನೆಲೆಯಲ್ಲಿ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು‌.

ಈ ವೇಳೆ ಅವರಿಗೆ ತಪಾಸಣೆ ನಡೆಸಿದಾಗ ಕರೋನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.

ಈ ಹಿನ್ನೆಲೆಯಲ್ಲಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಗಾವಿ ಚುನಾವಣೆ ಪ್ರಚಾರಕ್ಕೆ ಆಗಮಿಸಿದ್ದಾಗ ಕೂಡ ಸಿಎಂಗೆ ಜ್ವರ ಕಾಣಿಸಿಕೊಂಡಿತ್ತು.

ಪಾಸಿಟಿವ್ ವರದಿ ಬಂದ ಬಳಿಕ ಎಲ್ಲರೂ ತಪಾಸಣೆಗೆ ಒಳಗಾಗಿ ಕ್ವಾರೆಂಟೆನ್ ಆಗಿ ಎಂದು ಸಿಎಂ ಮನವಿ ಮಾಡಿದ್ದಾರೆ.

ಇದೀಗ ಅವರ ಜೊತೆಗೆ ಓಡಾಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಚಿವರಾದ ಜಗದೀಶ್ ಶೆಟ್ಟರ್, ಮುರುಗೇಶ ನಿರಾಣಿ, ಉಮೇಶ ಕತ್ತಿ, ಸೇರಿದಂತೆ ಹಲವಾರು ಮುಖಂಡರಿಗೆ ಮತ್ತು ಬೆಳಗಾವಿ ಜಿಲ್ಲೆಯ ಅಧಿಕಾರಿಗಳಿಗೆ ಕರೋನಾ ಆತಂಕ ಎದುರಾಗಿದೆ.

ಸಿಎಂ ನಾಗನೂರು ರುದ್ರಾಕ್ಷಿ ಮಠ ಹಾಗೂ ಹುಕ್ಕೇರಿ ಶಾಖಾಮಠಕ್ಕೆ ಭೇಟಿ ನೀಡಿ 70 ಕ್ಕೂ ಹೆಚ್ಚು ಶ್ರೀಗಳ ಭೇಟಿ ಮಾಡಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *