ರಾಜ್ಯ

ಸಚಿವ ಸಂಪುಟ ರಚನೆ ಹಿನ್ನೆಲೆಯಲ್ಲಿ ದಿಢೀರ್ ದೆಹಲಿಗೆ ತೆರಳಿದ ಸಿಎಂ

ನವದೆಹಲಿ prajakiran.com ರಾಜ್ಯದ ಬಿಜೆಪಿ ಸರಕಾರದ ಸಚಿವ ಸಂಪುಟದ ಪುನರ್ ರಚನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಸಂಜೆ ದಿಢೀರ್ ದೆಹಲಿಗೆ ತೆರಳಿದರು.

ಬಿಜೆಪಿ ಹೈಕಮಾಂಡ್ ನಿಂದ ಬುಲಾವ್ ಬಂದ ಹಿನ್ನೆಲೆಯಲ್ಲಿ ಸಿಎಂ ಸಂಜೆ 5:40ರ ವಿಮಾನದಲ್ಲಿ ದೆಹಲಿಗೆ ತೆರಳಲಿದರು.

ಇದಲ್ಲದೆ,( ನಾಳೆ)ಸೋಮವಾರ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಸಚಿವರ ಪಟ್ಟಿ ಫೈನಲ್ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಅಲ್ಲದೆ ವರಿಷ್ಠರಿಂದ ಒಪ್ಪಿಗೆ ಪಡೆದು ನಾಳೆಯೇ ದೆಹಲಿಯಿಂದ ವಾಪಸ್ ಆಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಬಹುತೇಕ ಒಪ್ಪಿಗೆ ಸಿಕ್ಕಿದರೆ
ಮಂಗಳವಾರ ಅಥವಾ ಬುಧವಾರವೇ ನೂತನ ಸಚಿವರ ಪ್ರಮಾಣವಚನ ಕೂಡ ನಡೆಯುವ ಸಾಧ್ಯತೆ ಇದೆ.

ಸಚಿವ ಸ್ಥಾನಕ್ಕಾಗಿ ಹೈಕಮಾಂಡ್, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ಹಲವರ ಬೆನ್ನು ಬಿದ್ದಿರುವ ಮಾಜಿ ಸಚಿವರು, ಶಾಸಕರ ಪೈಕಿ ಯಾರಿಗೆಲ್ಲ ಸಂಪುಟ ಸೇರುವ ಭಾಗ್ಯ ದೊರೆಯಲಿದೆ ಎಂಬುದು ಕಾದು ನೋಡಬೇಕು

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *