ನವದೆಹಲಿ prajakiran.com ರಾಜ್ಯದ ಬಿಜೆಪಿ ಸರಕಾರದ ಸಚಿವ ಸಂಪುಟದ ಪುನರ್ ರಚನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಸಂಜೆ ದಿಢೀರ್ ದೆಹಲಿಗೆ ತೆರಳಿದರು.
ಬಿಜೆಪಿ ಹೈಕಮಾಂಡ್ ನಿಂದ ಬುಲಾವ್ ಬಂದ ಹಿನ್ನೆಲೆಯಲ್ಲಿ ಸಿಎಂ ಸಂಜೆ 5:40ರ ವಿಮಾನದಲ್ಲಿ ದೆಹಲಿಗೆ ತೆರಳಲಿದರು.
ಇದಲ್ಲದೆ,( ನಾಳೆ)ಸೋಮವಾರ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಸಚಿವರ ಪಟ್ಟಿ ಫೈನಲ್ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ಅಲ್ಲದೆ ವರಿಷ್ಠರಿಂದ ಒಪ್ಪಿಗೆ ಪಡೆದು ನಾಳೆಯೇ ದೆಹಲಿಯಿಂದ ವಾಪಸ್ ಆಗುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಬಹುತೇಕ ಒಪ್ಪಿಗೆ ಸಿಕ್ಕಿದರೆ
ಮಂಗಳವಾರ ಅಥವಾ ಬುಧವಾರವೇ ನೂತನ ಸಚಿವರ ಪ್ರಮಾಣವಚನ ಕೂಡ ನಡೆಯುವ ಸಾಧ್ಯತೆ ಇದೆ.
ಸಚಿವ ಸ್ಥಾನಕ್ಕಾಗಿ ಹೈಕಮಾಂಡ್, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ಹಲವರ ಬೆನ್ನು ಬಿದ್ದಿರುವ ಮಾಜಿ ಸಚಿವರು, ಶಾಸಕರ ಪೈಕಿ ಯಾರಿಗೆಲ್ಲ ಸಂಪುಟ ಸೇರುವ ಭಾಗ್ಯ ದೊರೆಯಲಿದೆ ಎಂಬುದು ಕಾದು ನೋಡಬೇಕು