ಬೆಂಗಳೂರು Prajakiran.com : ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕಧಿರೇಶ್ ಅವರ ಕೊಲೆಯ ಬಗ್ಗೆ ಕಟ್ಟುನಿಟ್ಟಿನ ಕ್ರಮಕೈಳ್ಳಲು ಸೂಚಿಸಿದ್ದೇನೆ.
24 ಗಂಟೆಯಲ್ಲಿ ಅಪರಾಧಿಗಳನ್ನು ಬಂಧಿಸುವಂತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಗುರುವಾರ ಬೆಳಿಗ್ಗೆ ನಡೆದ ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕಧಿರೇಶ್ ಅವರ ಕೊಲೆಯಾದ ಕುರಿತು ಮಾತನಾಡಿದರು.
ಈ ಘಟನೆ ಕುರಿತು ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಪೋಲೀಸ್ ಕಮಿಷನರ್ ಗೆ ಸೂಚಿಸಿದ್ದೇನೆ.
ಹಾಗೂ 24 ಗಂಟೆಗಳಲ್ಲಿ ಅಪರಾಧಿಗಳನ್ನು ಬಂಧಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದರು.
ಇನ್ನೂ ರೇಖಾ ಅವರ ಪಾರ್ತೀವ ಶರೀರವನ್ನು ಕುಟುಂಬಕ್ಕೆ ರವಾನಿಸಿದ ನಂತರ, ಸರ್ಕಾರದೊಂದಿಗೆ ಚರ್ಚಿಸಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಇನ್ನೂ ಹತ್ಯೆ ನಡೆದ ಸ್ಥಳಕ್ಕೆ ಪೋಲಿಸ್ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದು, ಆದಷ್ಟು ಬೇಗ ಅಪರಾಧಿಗಳನ್ನು ಬಂಧಿಸುವುದಾಗಿ ಪೋಲೀಸ್ ಅಧಿಕಾರಿಗಳು ಹೇಳಿದ್ದಾರೆ.