ಬೆಂಗಳೂರು prajakiran.com : ರಾಜ್ಯದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು, ಎಚ್ಚರದಲ್ಲಿರುವಂತೆ ಜಿಲ್ಲಾಧಿಕಾರಿಗಳಿಗೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಸೂಚಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ವಿಡಿಯೋ ಸಂವಾದ ನಡೆಸಿ ಜಿಲ್ಲಾಡಳಿತದೊಂದಿಗೆ ಮಾತನಾಡಿದರು.
ಸಿಎಂ ರಾಜ್ಯದಲ್ಲಿ ಮುಂಗಾರು ಪ್ರಾರಂಭವಾಗುತ್ತಿರುವ ಹಿನ್ನೆಲೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತಂತೆ ಮುನ್ನೆಚ್ಚರಿಕೆ ಒಹಿಸಲು ಸೂಚಿಸಿದ್ದಾರೆ.
20 ಜಿಲ್ಲಾಡಳಿತಗಳ ಜೊತೆ, ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಚರ್ಚೆ ಮಾಡಿದ್ದು, ಬಹಳಷ್ಟು ಕಡೆ ಬಿತ್ತನೆ ಕಾರ್ಯ ಮುಗಿಯುತ್ತಿದೆ.
ಮುಂದೆ ಮಳೆ ಹೆಚ್ಚಾಗುವ ಸಂಭವ ಇರುವುದರಿಂದ ಮುಂಜಾಗ್ರತಾ ಕ್ರಮಕ್ಕೆ ಸೂಚಿಸಿದ್ದೇವೆ. ಇನ್ನು ಅಗತ್ಯ ಇರುವ ಕಡೆ ಎನ್ಡಿಆರ್ಎಫ್ ತಂಡ ಹೆಲಿಕಾಪ್ಟರ್ ವ್ಯವಸ್ಥೆ ಮಾಡಲಾಗಿದೆ.
ತಗ್ಗು ಪ್ರದೇಶಗಳಲ್ಲಿನ ನಿವಾಸಿಗಳನ್ನು ಎತ್ತರದ ಸ್ಥಳಗಳಿಗೆ ಸ್ಥಳಾಂತರಕ್ಕೆ ಸೂಚಿಸಲಾಗಿದೆ. ಕಟ್ಟೆಚ್ಚರ ವಹಿಸಲು ನಿರ್ದೇಶನ ನೀಡಲಾಗಿದೆ ಎಂದರು.
ಇದೇ ವೇಳೆ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ನೆರೆ ಹಾನಿ ಪರಿಹಾರಕ್ಕಾಗಿ ಎಷ್ಟು ಹಣ ಬೇಕಾದರು ಬಿಡುಗಡೆ ಮಾಡುತ್ತೇವೆ. 996 ಕೋಟಿ ಜಿಲ್ಲಾಧಿಕಾರಿಗಳ ಅಕೌಂಟ್ನಲ್ಲಿ ಹಣ ಇದೆ ಎಂದಿದ್ದಾರೆ.