ಬೆಂಗಳೂರು prajakiran.com : ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಬಸವರಾಜ್ ಬೊಮ್ಮಾಯಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಅವರ ಪದ್ಮನಾಭ ನಗರದ ನಿವಾಸಕ್ಕೆ ತೆರಳಿ ಭೇಟಿಯಾದರು.
ಅದರಲ್ಲೂ ವಿಶೇಷವಾಗಿ
ಅವರ ಕಾಲಿಗೆ ಬಿದ್ದು ಆರ್ಶೀವಾದ ಪಡೆದರು.
ಬಳಿಕ ತಮ್ಮ ಸಲಹೆ, ಮಾರ್ಗದರ್ಶನ ಬೇಕು ಎಂದು ಕೋರಿದರು.
ಈ ವೇಳೆ ಅವರಿಗೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಬರಮಾಡಿಕೊಂಡು ಸನ್ಮಾನಿಸಿ ಗೌರವಿಸಿದರು. ಮಾಜಿ ಸಚಿವ ವಿ. ಸೋಮಣ್ಣ ಸಾಥ್ ನೀಡಿದ್ದರು.
ಭೇಟಿ ಬಳಿಕ ಮಾತನಾಡಿದ ಬಸವರಾಜ ಬೊಮ್ಮಾಯಿ, ಅವರು ನನ್ನ ತಂದೆಯ ಆಪ್ತರು ಅಲ್ಲದೆ,ಜನತಾಪರಿವಾರದಲ್ಲಿದ್ದಾಗಿನ ಒಡನಾಟವನ್ನು ಹೊಂದಿದ್ದೇನೆ.
ಹೀಗಾಗಿ ಅವರ ಸಲಹೆ ಮಾರ್ಗದರ್ಶನ ಕೋರಿದ್ದೇನೆ. ಅಗತ್ಯ ಸಹಕಾರ ನೀಡುವುದಾಗಿ ಅಭಯ ನೀಡಿದ್ದಾರೆ ಎಂದರು.
ಜೊತೆಗೆ ಸಿಕ್ಕಿರುವ ಅವಕಾಶವನ್ನು ಸಮರ್ಥವಾಗಿ ನಿಭಾಯಿಸಿ, ರಾಜ್ಯಕ್ಕೆ ಉತ್ತಮ ಆಡಳಿತ ನೀಡುವಂತೆ ಹೇಳಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.