ರಾಜ್ಯ

ಬೆಂಗಳೂರಿನ ಎಂಟು ವಲಯಗಳಲ್ಲಿ ಆಗುವ ಅನಾಹುತಗಳಿಗೆ ನೀವೇ ಹೊಣೆಗಾರರು

ಬೆಂಗಳೂರು : ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶುಕ್ರವಾರ ಬೆಂಗಳೂರಿನ ಎಂಟು ವಲಯಗಳ ಉಸ್ತುವಾರಿ ಸಚಿವರ ಜೊತೆಗೆ ಸಭೆ ನಡೆಸಿ ವಸ್ತು ಸ್ಥಿತಿ ಅವಲೋಕಿಸಿದರು.

ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಂಟು ವಲಯಗಳ ಉಸ್ತುವಾರಿ ಸಚಿವರಿಗೆ  ನಿಮ್ಮ ವಲಯಗಳಲ್ಲಿ ಆಗುವಅನಾಹುತಗಳಿಗೆ ನೀವೇ ಹೊಣೆಗಾರರು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದರು.

ಪ್ರತಿ 50 ಬೆಡ್ ಗೆ ಒಬ್ಬ ನೋಡೆಲ್ ಅಧಿಕಾರಿ ನೇಮಿಸಿ, ನಿಮ್ಮ ವಲಯದಲ್ಲಿಯೇ ಸೋಂಕಿತರಿಗೆ ಚಿಕಿತ್ಸೆ ಕೊಡಿಸಿ, ಆದರೆ ಅವರನ್ನು ಬೇರೆ ವಲಯಗಳಿಗೆ ವರ್ಗಾಯಿಸಬೇಡಿ ಎಂದು ಸೂಚಿಸಿದರು.

ಅಲ್ಲದೆ, ಎದುರಾಗುತ್ತಿರುವ ವಿವಿಧ ವಿಷಯಗಳ ಕುರಿತು ಚರ್ಚಿಸಿ ಸಮಸ್ಯೆಗಳ ಪರಿಹಾರಕ್ಕಾಗಿ ಕೆಲ ಕ್ರಮಗಳನ್ನು ಸೂಚಿಸಿದರು.

ವಿಶೇಷವಾಗಿ ಕೋವಿಡ್ ಚಿಕಿತ್ಸೆಗೆ ಅಂಬುಲೆನ್ಸ್ ಎದುರಾಗಿರುವ ಹಿನ್ನಲೆಯಲ್ಲಿ ಮತ್ತಷ್ಟು ಅಂಬುಲೆನ್ಸ್ ಗಳನ್ನು ಇಂದೇ ಖರೀದಿಸಿ ವಲಯ ವಾರು ಹಂಚಿಕೆ ಮಾಡಲು ಸಿಎಂ ಸಮ್ಮತಿ ನೀಡಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *