ಬೆಂಗಳೂರು Prajakiran.com : ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಿಗದೆ, ಪರಿಸ್ಥಿತಿ ಕೈಮೀರಿ ಹೋಗುತ್ತಿದೆ.
ಹೀಗಾಗಿ ಸಿಎಂ ಬಿಎಸ್ ಯಡಿಯೂರಪ್ಪ ಇಂದು ಬೆಳಗ್ಗೆ ಅಣ್ಣಮ ದೇವಿ ದೇವಸ್ಥಾನ ಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಅವರು, ಕೊರೋನಾ ದೂರವಾಗಬೇಕು ಎಂದು ದೇವರಿಗೆ ಪ್ರಾರ್ಥನೆ ಮಾಡಿದ್ದೇನೆ.
ರಾಜ್ಯದಲ್ಲಿ ಕೋವಿಡ್ ಜಾಸ್ತಿ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ನಾಳೆ ಮಹತ್ವದ ಸಭೆ ಕರೆಯಲಾಗಿದೆ.
ಜನತಾ ಕರ್ಫ್ಯೂ ಯಾರು ಸರಿಯಾಗಿ ಪಾಲನೆ ಮಾಡುತ್ತಿಲ್ಲ. ಬಿಗಿ ಕ್ರಮ ಅನಿವಾರ್ಯವಾಗಿದೆ, ಲಾಕ್ ಡೌನ್ ಅನಿವಾರ್ಯ ಆಗಬಹುದು ಎಂದಿದ್ದಾರೆ.