ಬೆಂಗಳೂರು prajakiran.com : ನಾವುಗಳು ಒಟ್ಟಾಗಿದ್ದೇವೆ. ನಮ್ಮಲ್ಲಿ ಯಾವುದೇ ರಾಜಕೀಯ ಮನಸ್ಥಾಪ, ಗೊಂದಲಗಳಿಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೋ ಒಂದಿಬ್ಬರು ಮಾತನಾಡಿದರೆ ಗೊಂದಲವಾಗುವುದಿಲ್ಲ. ಅವರನ್ನು ಕರೆದು ಮಾತನಾಡುತ್ತೇವೆ. ನಾವೆಲ್ಲ ಒಗ್ಗಟ್ಟಾಗಿದ್ದೇವೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಿದೆ. ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾರೆ.
ಬೀಜಗಳು, ರಸಗೊಬ್ಬರ ಸಿಗುವುದಕ್ಕೆ ವ್ಯವಸ್ಥೆ ಮಾಡಿದ್ದೇವೆ. ಹಾಗೆಯೇ ಪ್ರವಾಹ ನಿರ್ವಹಣೆಯ ಬಗ್ಗೆ ಚರ್ಚಿಸಿದ್ದೇವೆ ಎಂದು ತಿಳಿಸಿದ್ದಾರೆ.