ಮೈಸೂರು prajakiran.com ಜುಲೈ 20: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ನಾನೊಂದು ತೀರ, ನೀನೊಂದು ತೀರ ವಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮೈಸೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ ‘ಮೊದಲು ಅವರ ತಟ್ಟೆಯಲ್ಲಿ ಏನಿದೆ ಎಂದು ಮೊದಲು ನೋಡಿಕೊಳ್ಳಲಿ. ಆಮೇಲೆ ಮತ್ತೊಬ್ಬರ ತಟ್ಟೆಯಲ್ಲಿ ಇರುವುದನ್ನು ಗಮನಿಸಿ’ ಎಂದರು.
ಡಿ.ಕೆ.ಶಿವಕುಮಾರ್ ಅವರಿಗೆ ತಾವು ಮುಖ್ಯಮಂತ್ರಿಯಾಗಬೇಕೆಂಬದು ಬಹಳ ವರ್ಷಗಳ ಕನಸು.
ಕೆಪಿಸಿಸಿ ಅಧ್ಯಕ್ಷರಾಗಿಯೇ ಸರಿಯಾಗಿ ಕೆಲಸ ಮಾಡಲು ಕಾಂಗ್ರೆಸ್ ಬಿಡುತ್ತಿಲ್ಲ. ಏನು ನಡೆಯುತ್ತಿದೆ ಎಂದು ನಾವು ಪ್ರತಿದಿನ ನೋಡುತ್ತಿದ್ದೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಕಾಂಗ್ರೆಸ್ ಖಾಯಂ ಆಗಿ ಪ್ರತಿಭಟನೆ ಮಾಡುವಂಥ ಪರಿಸ್ಥಿತಿ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕಾಂಗ್ರೆಸ್ ನಾಳೆ ಪ್ರತಿಭಟನೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಕಾಂಗ್ರೆಸ್ ನವರು ಯಾವಾಗಲೂ ಭ್ರಷ್ಟಾಚಾರ ಮಾಡಿಕೊಂಡೇ ಬಂದಿದ್ದಾರೆ. ಅಧಿಕಾರದಲ್ಲಿದ್ದಾಗ ಒಂದು ರೀತಿ, ಇಲ್ಲದಾಗ ಒಂದು ರೀತಿಯ ಭ್ರಷ್ಟಾಚಾರ ಎಂದರು.