ರಾಜ್ಯ

ಸಚಿವರಿಗೆ ಖಾತೆ ಹಂಚಿಕೆ ವೇಳೆ ಅಸಮಾಧಾನ ಸಹಜ ಎಂದ ಸಿಎಂ

ಹುಬ್ಬಳ್ಳಿ prajakiran. com : ಹೊಸಪೇಟೆಯ ವಿಜಯನಗರ ಶಾಸಕ ಆನಂದ್ ಸಿಂಗ್ ನನ್ನ ಹಳೆಯ ಸ್ನೇಹಿತ.

ಅವರಿಗೆ ಪ್ರವಾಸೋದ್ಯಮ ಖಾತೆ ನೀಡಿರುವುದು ಅಸಮಾಧಾನ ತಂದಿರುವ ಕುರಿತು  ಭೇಟಿ ಮಾಡಿ ಮಾತನಾಡುತ್ತೆನೆ.

ಅವರು ಯಾವ ಖಾತೆ ಹೇಳಿದ್ದರು ಎನ್ನುವುದು ಬಹಿರಂಗ ಪಡಿಸೋಕೆ ಆಗಲ್ಲ. ಸಂಪುಟ ರಚನೆ ಆದಾಗ ಅಸಮಾಧಾನ ಸಹಜ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿಂದು ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ದೇವೆಗೌಡರನ್ನು ಭೇಟಿ ಮಾಡಿದ್ದು ಯಾವುದೇ ರಾಜಕೀಯವಿಲ್ಲ. ಅಲ್ಲಿ ಯಾವುದೇ ರಾಜಕೀಯ ಚರ್ಚೆಯಾಗಿಲ್ಲ ಎಂದರು.

ಇನ್ನೂ ಪ್ರೀತಂಗೌಡ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಪ್ರೀತಂಗೌಡ ಯುವ ಉತ್ಸಾಹಿ ಶಾಸಕ. ಅವರು ಕೂಡಾ ನನ್ನ ಯುವ ಸ್ನೇಹಿತ.

ಅವರು ಯಾವುದೇ ರೀತಿ ತಿಳಿದುಕೊಳ್ಳೋದು ಬೇಡ. ಉತ್ಸಾಹದಲ್ಲಿ ಹೇಳಿಕೆ ನೀಡಿದ್ದಾರೆ ಎಂದು ಅವರು ಹೇಳಿದರು.

ಬೊಮ್ಮಾಯಿ ಸರ್ಕಾರ ಜನತಾ ಪರಿವಾರ ಶಾಸಕ ಎನ್ನುವ ಹೆಚ್ ಡಿಕೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಕಳೆದ 15 ವರ್ಷದಿಂದ ಬಿಜೆಪಿಯಲ್ಲಿದ್ದೆನೆ.

ನಾನು ಬಿಜೆಪಿಯ ಅಪ್ಪಟ ಕಾರ್ಯಕರ್ತನೂ ಹೌದು,ಬಿಜೆಪಿಯ ಸಿಎಂನೂ ಹೌದು. ಹೆಚ್ ಡಿಕೆ ಆ ರೀತಿ ಅಸಂಬದ್ಧ ಹೇಳಿಕೆ ನೀಡಬಾರದು‌ ಎಂದು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.

 

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *