ಧಾರವಾಡ prajakiran.com : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶುಕ್ರವಾರ ಸಂಜೆ ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಹಾವೇರಿ, ಚಿಕ್ಕಮಗಳೂರು ಸೇರಿ ನೆರೆಪೀಡಿತ 8 ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಸಿಇಓ ಅವರೊಂದಿಗೆ ನೆರೆ ಪ್ರವಾಹ ಕುರಿತು ವಿಡಿಯೋ ಸಂವಾದ ಜರುಗಿಸಿದರು.
ಅಲ್ಲದೆ, ಮುಂದಿನ 24 ಗಂಟೆ ಮಳೆ ಕುರಿತು ಅಲರ್ಟ್ ಇರುವಂತೆ ನಿರ್ದೇಶನ ನೀಡಿದರು.
ಯಾವುದೇ ಜೀವಹಾನಿ ಆಗದಂತೆ ಮುನ್ನೆಚ್ಚರಿಕೆ ವಹಿಸಲು ಮತ್ತು ರಸ್ತೆ, ಸೇತುವೆ, ಕಾಳಜಿ ಕೇಂದ್ರಗಳು ಅಗತ್ಯವಿದ್ದಲ್ಲಿ ತಕ್ಷಣ ಕ್ರಮವಹಿಸುವಂತೆ ಸೂಚಿಸಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ತಿಳಿಸಿದರು.
ಈ ವೀಡಿಯೋ ಸಂವಾದದಲ್ಲಿ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.