ರಾಜ್ಯ

ಪ್ರಧಾನಿ ಸಲಹೆ ನೀಡಿದರೆ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್…..!

ಬೆಂಗಳೂರು prajakiran.com : ರಾಜ್ಯದಲ್ಲಿ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆ ಮತ್ತೆ ಸಂಪೂರ್ಣ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ ಎಂಬ ವದಂತಿ ಹರಿದಾಡುತ್ತಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಯಡಿಯೂರಪ್ಪ ಪ್ರಧಾನಿ ಮೋದಿಯವರು ಲಾಕ್ ಡೌನ್ ಮಾಡಿ ಅಂದ್ರೆ ರಾಜ್ಯದಲ್ಲಿ ಲಾಕ್ ಡೌನ್ ಮಾಡಲಾಗುವುದು ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇಂದು ಪ್ರಧಾನಿ ಸುಪ್ರೀಂ ಕೋರ್ಟ್ ಸೂಚನೆ ವಿಚಾರವಾಗಿ ಕ್ಯಾಬಿನೆಟ್ ಸಭೆ ನಡೆಸುತ್ತಿದ್ದಾರೆ. ಸಭೆಯ ಬಳಿಕ ರಾಜ್ಯದಲ್ಲಿ ಏನು ಕ್ರಮ ಕೈಗೊಳ್ಳಬೇಕು ಅಂತ ನಿರ್ಧರಿಸುತ್ತೇವೆ.

ಪ್ರಧಾನಿ ಮೋದಿ ಅವರು ಏನು ಸೂಚನೆ ನೀಡುತ್ತಾರೆ ಅದನ್ನು ಪಾಲಿಸುವುದು ನಮ್ಮ ಜವಾಬ್ದಾರಿ.

ಸಂಜೆಯ ವೇಳೆ ಪ್ರಧಾನಿ ನಿರ್ಧಾರ ಪ್ರಕಟವಾಗಲಿದೆ. ಅವರು ಲಾಕ್ ಡೌನ್ ಜಾರಿ ಮಾಡುವಂತೆ ಸಲಹೆ ನೀಡಿದರೆ ರಾಜ್ಯದಲ್ಲಿಯೂ ಮತ್ತೆ ಲಾಕ್ ಡೌನ್ ಜಾರಿಗೆ ಬರಲಿದೆ ಎಂದು  ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *