ರಾಜ್ಯ

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ

ನಮಗೆ ನಮ್ಮ ಜವಾಬ್ದಾರಿಯ ಅರಿವಿದೆ

ಬೆಂಗಳೂರು prajakiran.com ಜನವರಿ 30 :

ಸಿದ್ದರಾಮಯ್ಯ ಅವರೆ, ನಮಗೆ ನಮ್ಮ ಜವಾಬ್ದಾರಿಯ ಅರಿವಿದೆ. ಜನಹಿತಕ್ಕಾಗಿ ನಾವು ಹಲವಾರು ಯೋಜನೆ ಜಾರಿಗೆ ತಂದಿದ್ದೇವೆ. ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನ ಮಾಡಬೇಡಿ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದರು.

2018 ರಲ್ಲಿ ಯಡಿಯೂರಪ್ಪ ಅವರು ಬಿಜೆಪಿ ಪ್ರಣಾಳಿಕೆಯಲ್ಲಿ ಹೇಳಲಾಗಿದ್ದ ಒಂದನ್ನೂ ಭಾ ಜ.ಪ ಈಡೇರಿಸಿಲ್ಲ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಯ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ವಾಗ್ದಾಳಿ ನಡೆಸಿದರು.

ಬೆಂಗಳೂರಿನಲ್ಲಿ ಇಂದು
ಮಾಧ್ಯಮದವರೊಂದಿಗೆ ಈ ಬಗ್ಗೆ ಮಾತನಾಡಿದ ಅವರು ಸಿದ್ದರಾಮಯ್ಯ ಅವರಿಂದ ಹೆಚ್ವಿನದೇನೂ ನಿರೀಕ್ಷೆ ಮಾಡಲಾಗುವುದಿಲ್ಲ.

ಜನಹಿತ ಏನಾಗಿದೆ ಎನ್ನುವುದನ್ನು ನೋಡಬೇಕು. ಅದನ್ನು ಬಿಟ್ಟು ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನ ಮಾಡಬಾರದು. ನಮ್ಮ ಪ್ರಣಾಳಿಕೆಯ ಘೋಷಣೆಗಳಲ್ಲಿ 96 ರಷ್ಟು ಅನುಷ್ಠಾನ ಮಾಡಿರುವುದಾಗಿ ಅವರು ಹೇಳಿದ್ದರು. ಆದರೂ ಜನ ತಿರಸ್ಕಾರ ಮಾಡಿದರು.

ಕ್ರಾರ್ಯಕ್ರಮದ ಘೋಷಣೆ ಮಾತ್ರವಲ್ಲ ಅನುಷ್ಠಾನವೂ ಆಗಬೇಕು. ನಮಗೆ ನಮ್ಮ ಜವಾಬ್ದಾರಿಯ ಅರಿವಿದೆ. ಯಾವ ರೀತಿ ಅನುಷ್ಠಾನ ಮಾಡಿದರೆ ಯಾರಿಗೆ ಅನುಕೂಲವಾಗುತ್ತದೆ.

ವಿದ್ಯಾರ್ಥಿಗಳು, ಯುವಕರು, ಮಹಿಳೆಯರು, ರೈತರು ದುಡಿಯುವ ವರ್ಗ, ಎಸ್.ಸಿ.ಎಸ್.ಟಿ ಸಮುದಾಯಗಳಿಗೆ ಒಳ್ಳೆಯದು ಮಾಡಬೇಕೆನ್ನುವ ಅರಿವಿದೆ ಎಂದರು.

ಮೈಸೂರಿನಲ್ಲಿ ಸಂಸದರು ಹಾಗೂ ಶಾಸಕರ ನಡುವೆ ಜಗಳ ಅಲ್ಲ. ಅದು ಅಭಿವೃದ್ಧಿ ಆಗಬೇಕೆನ್ನುವ ವಿಭಿನ್ನ ದೃಷ್ಟಿಕೋನಗಳು. ಶಾಸಕರು ಮತ್ತು ಸಂಸದರನ್ನು ಕರೆದು ಮಾತನಾಡುವುದಾಗಿ ತಿಳಿಸಿದರು.

*ಕಾಂಗ್ರೆಸ್ ಒಳಜಗಳ*

ಕಾಂಗ್ರೆಸ್ ನಲ್ಲೂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ಒಳಜಗಳ ಬೀದಿಗೆ ಬಂದಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಅದು ಅವರ ಆಂತರಿಕ ವಿಚಾರವಾದರೂ, ಸಾರ್ವತ್ರಿಕವಾಗಿ ಎಲ್ಲರಿಗೂ ಗೊತ್ತಿರುವ ಸಂಗತಿ.

ಇದೊಂದೇ ಪ್ರಸಂಗವಲ್ಲ, ಹಲವಾರು ಆಗಿವೆ. ಈಗ ಅದು ಬಹಿರಂಗವಾಗಿದೆ. ಆದರೆ, ಕಾಂಗ್ರೆಸ್ ಯಾವಾಗಲೂ ಜನಹಿತಕ್ಕಾಗಿ ಎಂದೂ ಕೆಲಸ ಮಾಡಿಲ್ಲ. ಆಡಳಿತ ಪಕ್ಷದಲ್ಲಿದ್ದಾಗಲೂ ಮಾಡಿಲ್ಲ, ವಿರೋಧ ಪಕ್ಷದಲ್ಲಿದ್ದಾಗಲೂ ಮಾಡಿಲ್ಲ.

ಅಧಿಕಾರವನ್ನು ಹೇಗೆ ಹಿಡಿಯಬೇಕು, ಯಾವ ರೀತಿ ತಮ್ಮ ಸ್ವಾರ್ಥಕ್ಕಾಗಿ ಬಳಕೆ ಮಾಡಬೇಕು ಎನ್ನುವುದು ಬಿಟ್ಟರೆ ಬೇರೆ ಏನೂ ಮಾಡಿಲ್ಲ. ಯಾರೇ ನಾಯಕರಾಗಲಿ, ತಮ್ಮ ನೀತಿ ನಿಲುವುಗಳು, ತಮ್ಮ ಸ್ವಾರ್ಥಕ್ಕಾಗಿ ಬಳಕೆ ಮಾಡಿಕೊಳ್ಳುತ್ತಾರೆ. ಅದು ಅವರ ಗುಣಧರ್ಮ ಎಂದರು.

*ಸಂಪುಟ ವಿಸ್ತರಣೆ*
ಸಂಪುಟ ವಿಸ್ತರಣೆ ಬಗ್ಗೆ ಬಹಿರಂಗವಾಗಿ ಚರ್ಚಿಸುವುದಿಲ್ಲ. ವರಿಷ್ಠರು ಕರೆದಾಗ ಹೋಗಲು ಸಿದ್ಧನಿದ್ದೇನೆ. ಬಜೆಟ್ ಇದ್ದ ಸಂದರ್ಭದಲ್ಲಿ ಎಂ.ಪಿಗಳನ್ನು ಭೇಟಿಯಾಗುವ ಸಂಪ್ರದಾಯವಿದೆ. ಆದಷ್ಟು ಬೇಗ ಸಂಸದರನ್ನು ದೆಹಲಿಯಲ್ಲಿ ಭೇಟಿಯಾಗುವುದಾಗಿ ತಿಳಿಸಿದರು.

*ನಿಗಮ ಮಂಡಳಿಗಳ ನೇಮಕಾತಿ*
ನಿಗಮ ಮಂಡಳಿಗಳ ನೇಮಕಾತಿಯ ಬಗ್ಗೆ ಪಟ್ಟಿ ಇನ್ನೂ ಬಿಡುಗಡೆಯಾಗಿಲ್ಲ ಎಂಬ ಚರ್ಚೆಯಾಗುತ್ತಿರುವ ಬಗ್ಗೆ ಉತ್ತರಿಸಿ, ಪಕ್ಷದಲ್ಲಿ ಆಂತರಿಕವಾಗಿ ತೀರ್ಮಾನ ಮಾಡಲಾಗುತ್ತದೆ ಎಂದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *