ನಾಡಿಗೆ ಒಳ್ಳೆಯ ಸಂದೇಶವನ್ನು ಸಾರುವ ಅರ್ಥಪೂರ್ಣ ಕಾರ್ಯಕ್ರಮವಾಗಲಿದೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ತುಮಕೂರು prajakiran. com, ಮಾ. 31 :
ಪರಮಪೂಜ್ಯ ಡಾ|| ಶ್ರೀ ಶ್ರೀ ಶಿವಕುಮಾರ ಮಹಾಶಿವಯೋಗಿಗಳ 115ನೇ ಜಯಂತಿ ಮತ್ತು ಗುರುವಂದನಾ ಮಹೋತ್ಸವ ನಾಳೆ ನಡೆಯಲಿದ್ದು, ನಾಡಿಗೆ ಒಳ್ಳೆಯ ಸಂದೇಶವನ್ನು ಸಾರುವ ಅರ್ಥಪೂರ್ಣ ಕಾರ್ಯಕ್ರಮವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಶ್ರೀಗಳ ಬದುಕಿನಿಂದ ದೊರೆತಿರುವ ಪ್ರೇರಣೆಯ ಆಚರಣೆ ಇದಾಗಿದ್ದು, ಇಂದಿನ ಪೀಳಿಗೆಗೆ ಶ್ರೀಗಳ ವಿಚಾರಗಳನ್ನು ತಿಳಿಸುವ ಅರ್ಥಪೂರ್ಣ ಕಾರ್ಯಕ್ರಮವಾಗಲಿದೆ.
ಶ್ರೀ ಸಿದ್ಧಗಂಗಾ ಮಠದ ಶಿಕ್ಷಣ ಹಾಗೂ ದಾಸೋಹ ಪರಂಪರೆಗಳು ಇಡೀ ದೇಶಕ್ಕೆ ಮಾದರಿಯಾಗಿದೆ. ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಷಾ ಅವರು ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ.
ದೊಡ್ಡ ಸಂಖ್ಯೆಯಲ್ಲಿ ಭಕ್ತಾದಿಗಳು ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಪೂರ್ವಭಾವಿ ತಯಾರಿಗಳ ಬಗ್ಗೆ ಶ್ರೀ ಸಿದ್ಧಲಿಂಗ ಸ್ವಾಮೀಜಿಗಳನ್ನು ಭೇಟಿ ಮಾಡಿ ಚರ್ಚಿಸಿರುವುದಾಗಿ ತಿಳಿಸಿದರು.