ಬೇಕಾಬಿಟ್ಟಿ ಕೆಲಸ ಮಾಡುವುದನ್ನು ಬಿಟ್ಟು ಸಮಯಕ್ಕೆ ಸರಿಯಾಗಿ ಯೋಜನೆ ಅನುಷ್ಠಾನಕ್ಕೆ ತನ್ನಿ
ಬೆಂಗಳೂರು prajakiran.com : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ನಡೆಸಿದ ಹಿರಿಯ ಅಧಿಕಾರಿಗಳ
ಮೊದಲ ಸಭೆಯಲ್ಲಿಯೇ ಖಡಕ್ ವಾರ್ನಿಂಗ್ ನೀಡಿದರು.
ಬೇಕಾಬಿಟ್ಟಿ ಕೆಲಸ ಮಾಡುವುದನ್ನು ಬಿಟ್ಟು ಸಮಯಕ್ಕೆ ಸರಿಯಾಗಿ ಯೋಜನೆಗಳು ಅನುಷ್ಠಾನಕ್ಕೆ ತರಬೇಕು ಎಂದು ಸೂಚಿಸಿದರು.
ಅಲ್ಲದೆ,ಅಧಿಕಾರಿಗಳ ಸಭೆ ನಡೆಸಿದ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನಮ್ಮ ಸರ್ಕಾರದ ಯೋಜನೆಗಳು ತಲುಪಬೇಕು. ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯತೆ ಕಾಯ್ದುಕೊಳ್ಳಬೇಕು.
ಅಧಿಕಾರಿಗಳು ಶೇ.5ರಷ್ಟು ಅನಗತ್ಯ ಖರ್ಚು ಕಡಿಮೆ ಮಾಡಿ ನಿಗದಿತ ಸಮಯದೊಳಗೆ ಯೋಜನೆಗಳು ಜಾರಿಗೆ ಬರುವಂತೆ ಕೆಲಸಮಾಡಬೇಕು ಎಂದರು.
ದಕ್ಷ, ಪ್ರಾಮಾಣಿಕ, ಜನಪರ ಆಡಳಿತ ನೀಡುವುದೇ ಸರ್ಕಾರದ ಅದ್ಯತೆಯಾಗಿದೆ ಎಂದರು
ಇದಲ್ಲದೆ,15 ದಿನಗಳೊಳಗಾಗಿ ಎಲ್ಲಾ ಇಲಾಖೆ ಯೋಜನೆಗಳು ಅನುಷ್ಠಾನಕ್ಕೆ ಬರಬೇಕು.
ಕಡತ ವಿಲೇವಾರಿ ಅಭಿಯಾನ ಮಾಡಲು ನಿರ್ಧರಿಸಿದ್ದು, 15 ದಿನಗಳಲ್ಲಿ ಸೂಕ್ತ ಕ್ರಮಗಳನ್ನ ಜರುಗಿಸುವಂತೆ ಸೂಚಿಸಲಾಗಿದೆ ಎಂದು ವಿವರಿಸಿದರು.