ಜಿಲ್ಲೆ

ಧಾರವಾಡ ಪಶ್ಚಿಮ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಪಿ.ಎಚ್. ನೀರಲಕೇರಿ

ಧಾರವಾಡ ಪ್ರಜಾಕಿರಣ.ಕಾಮ್ : ಕಾಂಗ್ರೆಸ್ ಟಿಕೆಟ್ ಸಿಗುವ ವಿಶ್ವಾಸದ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ (74) ಕಾಂಗ್ರೆಸ್‌ ಅಭ್ಯರ್ಥಿತನವನ್ನು ಬಯಸಿ ಕೆಪಿಸಿಸಿ ರಾಜ್ಯ ವಕ್ತಾರ ಪಿ.ಎಚ್. ನೀರಲಕೇರಿ ಅವರು ಧಾರವಾಡದಲ್ಲಿ ಸೋಮವಾರ ತಮ್ಮ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‌ನೂರಕ್ಕೆ ನೂರರಷ್ಟು ನನಗೆ ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ (74) ಕಾಂಗ್ರೆಸ್ ಟಿಕೆಟ್ ಸಿಗುವ ಭರವಸೆ ಇರುವುದರಿಂದ ಧಾರವಾಡದಲ್ಲಿ ಚುನಾವಣಾಧಿಕಾರಿ ಅವರಿಗೆ ಕಾಂಗ್ರೆಸ್ ಅಭ್ಯರ್ಥಿ ಎಂದು ನಾಮಪತ್ರ ಸಲ್ಲಿಸಲಾಗಿದೆ ಎಂದರು.

ಪಕ್ಷದ ನಿಷ್ಠಾವಂತ ಕಾರ್ಯಕರ್ತನಾದ ನನಗೆ ಟಿಕೆಟ್ ಸಿಗುವ ಖಚಿತತೆ ಇದೆ. ಅಲ್ಲದೇ ಕ್ಷೇತ್ರದಲ್ಲಿ ಆಡಳಿತ ವಿರೋಧಿ ಅಲೆಯಿದ್ದು, ಈ ಸಾರಿ ಅರವಿಂದ್ ಬೆಲ್ಲದ ಅವರನ್ನು ಸೋಲಿಸಲು ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.

ರಾಜ್ಯದಲ್ಲಿ ಈ ಸಾರಿ ಜನ ಬಿಜೆಪಿಯನ್ನು ಮನೆಗೆ ಕಳಿಸಲೇಬೇಕು ಎಂದು ಪಣತೊಟ್ಟಿರುವುದರಿಂದ ಕಾಂಗ್ರೆಸ್ ಪರ ಅಲೆ ಧಾರವಾಡ ಕ್ಷೇತ್ರದಲ್ಲಿ ವ್ಯಾಪಕವಾಗಿದ್ದು ಶೀಘ್ರದಲ್ಲೇ ಟಿಕೆಟ್ ಬಗ್ಗೆ ಹೈಕಮಾಂಡ್ ಪಟ್ಟಿ ಘೋಷಣೆ ಮಾಡಲಿದ್ದಾರೆ ಎಂದು ತಿಳಿಸಿದರು.

ಈ ವೇಳೆ ನೀಲಪ್ಪ ಕಂಬಳಿ, ಸಿದ್ದಣ್ಣ ಕಂಬಾರ, ರವಿಗೌಳಿ, ಶ್ರೀಮತಿ ರಾಜೇಶ್ವರಿ ನಿರಲಕೇರಿ, ಪ್ರೊ,ಗಲಗಲಿ ಅಪಾರ ಬೆಂಬಲಿಗರು ಇದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *