ರಾಜ್ಯ

ಧಾರವಾಡ ಜಿಲ್ಲೆಗೆ ಉನ್ನತ ಮಟ್ಟದ ಯೋಜನೆ ಎಂದು ಬಾಯಿ ಬಾಯಿ ಬಡೆದುಕೊಳ್ಳುವ ಜೋಶಿ, ಶೆಟ್ಟರ್ ಎಂದು ಟೀಕಿಸಿದ ಕಾಂಗ್ರಸ್ ವಕ್ತಾರ

ಧಾರವಾಡ prajakiran. com : ರಸ್ತೆ ಸುಧಾರಣೆ ವಿಚಾರದಲ್ಲಿ ಅನುದಾನ ಸದ್ಬಳಕೆ ಆಗುತ್ತಿಲ್ಲ ಹಾಗೂ ಕಾರ್ಯಾಂಗ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಕೆಪಿಸಿಸಿ ವಕ್ತಾರರಾದ ಪಿ.ಎಚ್ ನೀರಲಕೇರಿ ಆರೋಪಿಸಿದರು.

ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಕಾರ್ಯಾಂಗವಾಗಿ ಕೆಲಸ ಮಾಡುವ ಅಧಿಕಾರಿಗಳು ಶಾಸಕರು ಹಾಗೂ ಮೇಯರ್ ಅವರ ಅಣತಿಯಂತೆ ಕೆಲಸ ಮಾಡುತ್ತಿದ್ದು ಇವರ ಬದ್ಧತೆ ಎಲ್ಲಿದೆ ಎಂಬುದು ತಿಳಿಯುತ್ತಿಲ್ಲ ಎಂದು ಆರೋಪಿಸಿದರು.

ರಸ್ತೆಗಳ ಕಾಮಗಾರಿಯನ್ನು ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ ಸಂಪೂರ್ಣ ಕಾಮಗಾರಿ ಮಾಡದೇ ಜನರಿಗೆ ತೊಂದರೆಯಾಗುತ್ತಿದೆ ಈ ಕುರಿತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಯಾವುದೇ ಅಭಿವೃದ್ಧಿ ಕೆಲಸ ಮಾಡದೇ ಜೋಕರ್ ರಂತೆ ಧಾರವಾಡಕ್ಕೆ ಬಂದು ಹೋಗುತ್ತಾರೆ ಎಂದು ಆರೋಪಿಸಿದರು.

ಧಾರವಾಡ ಜಿಲ್ಲೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಉನ್ನತ ಮಟ್ಟದಲ್ಲಿ ಈ ಯೋಜನೆ ತರಲಾಗುವುದು ಎಂದು ಬಾಯಿ ಬಾಯಿ ಬಡೆದುಕೊಳ್ಳುತ್ತಿದ್ದಾರೆ.

ಕಾಮಗಾರಿ ಪೂರ್ಣ ಮಾಡದೇ ಈಗ ಮೌನಕ್ಕೆ ಏಕೆ ಶರಣಾಗಿದ್ದಾರೆ ಎಂಬುವುದು ತಿಳಿಯುತ್ತಿಲ್ಲ ಎಂದು ಪ್ರಶ್ನಿಸಿದರು.

ಬಿ ಆರ್ ಟಿ ಎಸ್ ಸೇರಿದಂತೆ ಹಲವಾರು ಯೋಜನೆಗಳಿಗಾಗಿ ಕೋಟಿ ಕೋಟಿ ಹಣ ಬಂದರು ಯೋಜನೆಗಳನ್ನು ಪೂರ್ಣಗೊಳಿಸಿಲ್ಲ ಎಂದು ಇದರ ಲೆಕ್ಕವನ್ನು ಬಿಜೆಪಿ ಸರ್ಕಾರದ ಶಾಸಕರು ಹಾಗೂ ಸಚಿವರು ಉತ್ತರವನ್ನು ನೀಡಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ ಬಸವರಾಜ ಗುರಿಕಾರ, ರಾಜು ಮುಸವಳ್ಳಿ, ಭೀಮಸೇನ ಕಾಗೆ, ಸೇರಿದಂತೆ ಹಲವರು ಇದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *