ಧಾರವಾಡ prajakiran.com : ಧಾರವಾಡ ಜಿಪಂ ಸದಸ್ಯ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಬಂಧಿಸಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಬಿಡುಗಡೆಗೆ ಪ್ರಾರ್ಥಿಸಿ ಅವರ ಅಭಿಮಾನಿಗಳು ದೇವರ ಮೊರೆ ಹೋಗಿದ್ದಾರೆ.
ಧಾರವಾಡದ ಕಮಲಾಪುರದಲ್ಲಿರುವ ಪತ್ರೇಪ್ಪಜ್ಜ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿ ಆದಷ್ಟು ಬೇಗ
ಬೆಳಗಾವಿಯ ಹಿಂಡಲಗಾ ಜೈಲಿನಿಂದ ಹೊರಬರಲಿ ಎಂದು ಬೇಡಿಕೊಂಡರು.
ನ.5 ರಂದು ಸಿಬಿಐ ಅಧಿಕಾರಿಗಳು ಅವರ ನಿವಾಸದಿಂದ ಕರೆದುಕೊಂಡು ಹೋಗಿ ಆನಂತರ ಹೆಚ್ಚಿನ ವಿಚಾರಣೆಗೆ ವಶಕ್ಕೆ ತೆಗೆದುಕೊಂಡು ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.
ನ್ಯಾಯಾಲಯದಿಂದ ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ಆದಷ್ಟು ಬೇಗ ಜಾಮೀನು ಸಿಗುವ ವಿಶ್ವಾಸ ಇದೆ ಎಂದು ಅನೇಕ ಮುಖಂಡರು ಭರವಸೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಲವು ಮುಖಂಡರು ಹಾಗೂ ಪಂಚಮಸಾಲಿ ಸಮಾಜದ ಹಿರಿಯರು, ಯುವಕರು, ಅಭಿಮಾನಿಗಳು ಭಾಗವಹಿಸಿದ್ದರು.