ರಾಜ್ಯ

ಮಾಜಿ ಸಚಿವ ವಿನಯ ಕುಲಕರ್ಣಿ ಬಿಡುಗಡೆಗೆ ಪ್ರಾರ್ಥಿಸಿ ದೇವರ ಮೊರೆ ಹೋದ ಅಭಿಮಾನಿಗಳು

ಧಾರವಾಡ prajakiran.com : ಧಾರವಾಡ ಜಿಪಂ ಸದಸ್ಯ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಬಂಧಿಸಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಬಿಡುಗಡೆಗೆ ಪ್ರಾರ್ಥಿಸಿ ಅವರ ಅಭಿಮಾನಿಗಳು ದೇವರ ಮೊರೆ ಹೋಗಿದ್ದಾರೆ.

ಧಾರವಾಡದ ಕಮಲಾಪುರದಲ್ಲಿರುವ ಪತ್ರೇಪ್ಪಜ್ಜ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿ ಆದಷ್ಟು ಬೇಗ
ಬೆಳಗಾವಿಯ ಹಿಂಡಲಗಾ ಜೈಲಿನಿಂದ ಹೊರಬರಲಿ ಎಂದು ಬೇಡಿಕೊಂಡರು.

ನ.5 ರಂದು ಸಿಬಿಐ ಅಧಿಕಾರಿಗಳು ಅವರ ನಿವಾಸದಿಂದ ಕರೆದುಕೊಂಡು ಹೋಗಿ ಆನಂತರ ಹೆಚ್ಚಿನ ವಿಚಾರಣೆಗೆ ವಶಕ್ಕೆ ತೆಗೆದುಕೊಂಡು ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.

ನ್ಯಾಯಾಲಯದಿಂದ ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ಆದಷ್ಟು ಬೇಗ ಜಾಮೀನು ಸಿಗುವ ವಿಶ್ವಾಸ ಇದೆ ಎಂದು ಅನೇಕ ಮುಖಂಡರು ಭರವಸೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಲವು ಮುಖಂಡರು ಹಾಗೂ ಪಂಚಮಸಾಲಿ ಸಮಾಜದ ಹಿರಿಯರು, ಯುವಕರು, ಅಭಿಮಾನಿಗಳು ಭಾಗವಹಿಸಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *