ಬಾಯಿಗೆ ಕಪ್ಪು ಪಟ್ಟಿಗೆ ಕಟ್ಟಿಕೊಂಡು ಆಕ್ರೋಶ
ಬೆಂಗಳೂರು ಪ್ರಜಾಕಿರಣ.ಕಾಮ್ :
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರದ ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ರಾಜ್ಯದ ಕಾಂಗ್ರೆಸ್ ಪಕ್ಷದ ನಾಯಕರು ಬೆಂಗಳೂರಿನ ಫ್ರೀಡಮ್ ಪಾರ್ಕ್ ನಲ್ಲಿ ಮೌನ ಪ್ರತಿಭಟನೆ ನಡೆಸಿದರು.
ರಾಹುಲ್ ಗಾಂಧಿಯನ್ನು ಶತಾಯ ಗತಾಯ ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲು ಹುನ್ನಾರ ನಡೆಸಿದೆ ಎಂದು ದೂರಿದರು
ಕೇಂದ್ರ ತನಿಖಾ ಸಂಸ್ಥೆಗಳ ದುರುಪಯೋಗ ಮತ್ತು ಸಾಂವಿಧಾನಿಕ ಸಂಸ್ಥೆಗಳ ಸ್ವಾತಂತ್ರ್ಯವನ್ನು ನಾಶಗೊಳಿಸುತ್ತಿರುವುದನ್ನು ತೀವ್ರವಾಗಿ ವಿರೋಧಿಸಿದರು.
ಕೆಪಿಸಿಸಿ ಫ್ರೀಡಂ ಪಾರ್ಕ್ ನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವರಾದ ಬೋಸರಾಜು, ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ ಸೇರಿದಂತೆ ಅನೇಕರು ಭಾಗವಹಿಸಿದರು.