ರಾಜ್ಯ

ಧಾರವಾಡದ ನಡುರಸ್ತೆಯಲ್ಲಿಯೇ ಸಸಿ ನೆಟ್ಟು ಕಮಿಷನ್ ಸರಕಾರದ ವಿರುದ್ದ ಆಕ್ರೋಶ

ಧಾರವಾಡ prajakiran. com :ಧಾರವಾಡದ ಮುರುಘಾಮಠ ರಸ್ತೆ ದುರಸ್ತಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮಂಗಳವಾರ ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು.  

ಧಾರವಾಡ- 71 ನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅರವಿಂದ ಏಗನಗೌಡರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಸಲಾಯಿತು.

ಇಲ್ಲಿನ ಸವದತ್ತಿ‌ ರಸ್ತೆಯಲ್ಲಿನ ಡಿಪೋ ಸರ್ಕಲ್‌ದಲ್ಲಿ‌ ಕಳಪೆ ಕಾಮಗಾರಿಯಿಂದ ಸಂಚಾರಕ್ಕೆ ಆಗುತ್ತಿರುವ ತೊಂದರೆಯನ್ನು ಕೂಡಲೇ ಸರಿಪಡಿಸಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ರಸ್ತೆಯ ಮಧ್ಯದಲ್ಲೇ ಗಿಡ ನೆಟ್ಟು ಮುಖಂಡರು ಬಿಜೆಪಿ ಶಾಸಕ, ಸಚಿವರ, ಅಧಿಕಾರಿಗಳ 40 % ಕಮಿಷನ್ ಆಸಿಗೆ ಟೆಂಡರ್ ಶ್ಯೂರ್ ರಸ್ತೆ ಹದಗೆಟ್ಟಿದೆ ಎಂದು ಘೋಷಣೆ ಕೂಗಿ  ಆಕ್ರೋಶ ವ್ಯಕ್ತಪಡಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಏಗನಗೌಡರ, ಪ್ರಧಾನ ಕಾರ್ಯದರ್ಶಿ ಮಂಜುನಾಥ ನಡಟ್ಟಿ, ಮುಖಂಡರಾದ ಪ್ರಶಾಂತ ಕೇಕರೆ, ಆನಂದ ಸಿಂಗನಾಥ,  ಬಸವರಾಜ ಜಾಧವ , ಶಿವು ಚನಗೌಡರ, ಪಾಲಿಕೆ ಸದಸ್ಯರಾದ ಬಸವರಾಜ ಕಮತಿ, ದೀಪಾ ನೀರಲಕಟ್ಟಿ, ಸೂರವ್ವ ಪಾಟೀಲ, ಮೈನುದ್ದಿನ್ ನಧಾಫ, ನಿಜಾಮ ರಾಹಿ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *