ಧಾರವಾಡ prajakiran. com :ಧಾರವಾಡದ ಮುರುಘಾಮಠ ರಸ್ತೆ ದುರಸ್ತಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮಂಗಳವಾರ ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು.
ಧಾರವಾಡ- 71 ನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅರವಿಂದ ಏಗನಗೌಡರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಸಲಾಯಿತು.
ಇಲ್ಲಿನ ಸವದತ್ತಿ ರಸ್ತೆಯಲ್ಲಿನ ಡಿಪೋ ಸರ್ಕಲ್ದಲ್ಲಿ ಕಳಪೆ ಕಾಮಗಾರಿಯಿಂದ ಸಂಚಾರಕ್ಕೆ ಆಗುತ್ತಿರುವ ತೊಂದರೆಯನ್ನು ಕೂಡಲೇ ಸರಿಪಡಿಸಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ರಸ್ತೆಯ ಮಧ್ಯದಲ್ಲೇ ಗಿಡ ನೆಟ್ಟು ಮುಖಂಡರು ಬಿಜೆಪಿ ಶಾಸಕ, ಸಚಿವರ, ಅಧಿಕಾರಿಗಳ 40 % ಕಮಿಷನ್ ಆಸಿಗೆ ಟೆಂಡರ್ ಶ್ಯೂರ್ ರಸ್ತೆ ಹದಗೆಟ್ಟಿದೆ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಏಗನಗೌಡರ, ಪ್ರಧಾನ ಕಾರ್ಯದರ್ಶಿ ಮಂಜುನಾಥ ನಡಟ್ಟಿ, ಮುಖಂಡರಾದ ಪ್ರಶಾಂತ ಕೇಕರೆ, ಆನಂದ ಸಿಂಗನಾಥ, ಬಸವರಾಜ ಜಾಧವ , ಶಿವು ಚನಗೌಡರ, ಪಾಲಿಕೆ ಸದಸ್ಯರಾದ ಬಸವರಾಜ ಕಮತಿ, ದೀಪಾ ನೀರಲಕಟ್ಟಿ, ಸೂರವ್ವ ಪಾಟೀಲ, ಮೈನುದ್ದಿನ್ ನಧಾಫ, ನಿಜಾಮ ರಾಹಿ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.