ರಾಜ್ಯ

ರಮೇಶ ಜಾರಕಿಹೊಳಿ ಬಂಧನಕ್ಕೆ ಹೆಚ್ಚಿದ ಒತ್ತಡ ; ರಾಜ್ಯದ ಹಲವಡೆ ಕಾಂಗ್ರೆಸ್ ಕಾರ್ಯಕರ್ತರ ಬಂಧನ, ಬಿಡುಗಡೆ

ಬೆಂಗಳೂರು prajakiran.com : ರಾಸಲೀಲೆ ಸಿಡಿ ಪ್ರಕರಣದಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿಯ ವಿರುದ್ಧ ದೂರು ದಾಖಲಾದರೂ ಇವರೆಗೆ ಪೊಲೀಸರು ಅವರನ್ನು ಬಂಧಿಸದಿರುವುದನ್ನು ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಅವಾಚ್ಯ ಶಬ್ದಗಳ ಬಳಕೆ ಖಂಡಿಸಿ ಭಾನುವಾರ ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಬೆಂಗಳೂರಿನ ಸದಾಶಿವನಗರದ ರಮೇಶ ಜಾರಕಿಹೊಳಿಯವರ ನಿವಾಸದ ಎದುರು ಜಮಾಯಿಸಿದ ಮಹಿಳಾ ಕಾರ್ಯಕರ್ತರು ಕಾಮುಕ ರಮೇಶ ಬಂಧಿಸಿ ಎಂದು ಘೋಷಣೆ ಕೂಗಿದರು.

ಪುಷ್ಪಾ ಅಮರನಾಥ ನೇತೃತ್ವದಲ್ಲಿ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ ಪೊಲೀಸರು ಅವಕಾಶ‌ನೀಡದ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಧರಣಿ ಕುಳಿತರು.

ಹೀಗಾಗಿ ಅವರನ್ನು ಪೊಲೀಸರು ಬಂಧಿಸಿ ಆನಂತರ ಬಿಡುಗಡೆ ಗೊಳಿಸಿದರು.

ಇದೇ ವೇಳೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಮುಂದೆ ಜಮಾಯಿಸಿ ರಮೇಶ ಜಾರಕಿಹೊಳಿಯ ಬಂಧನಕ್ಕೆ ಆಗ್ರಹಿಸಿದರು.

ಅಲ್ಲದೆ ರಾಜ್ಯದ ವಿವಿಧ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಬಿಜೆಪಿ ಸರಕಾರದ ವಿರುದ್ದ ಕಿಡಿ ಕಾರಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *