ಬೆಂಗಳೂರು prajakiran.com : ರಾಜ್ಯದಲ್ಲಿ ಡಿಸೆಂಬರ್ 27ರಂದು ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಪ್ರಕಟಗೊಂಡಿದೆ.
ಸಿಎಂ ಬಸವರಾಜ ಬೊಮ್ಮಾಯಿ, ಸಚಿವರಾದ ಬಿ. ಶ್ರೀರಾಮುಲು, ಶಶಿಕಲಾ ಜೊಲ್ಲೆ ಅವರಿಗೆ ತಮ್ಮ ತವರು ಕ್ಷೇತ್ರದಲ್ಲಿ ಭಾರೀ ಮುಖಭಂಗವಾಗಿದೆ.
ಶಿಗ್ಗಾಂವಿ ವಿಧಾನಸಭೆ ಕ್ಷೇತ್ರದಲ್ಲಿ ಬರುವ ಬಂಕಾಪುರ ಪುರಸಭೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ಸಿಎಂ ಬೊಮ್ಮಾಯಿ ಸ್ವಕ್ಷೇತ್ರದಲ್ಲಿ ಭಾರಿ ಮುಖಭಂಗವಾಗಿದೆ.
ಕಾಂಗ್ರೆಸ್ 14 ಬಿಜೆಪಿ 7 ಇತರೇ 2 ಕ್ಷೇತ್ರದಲ್ಲಿ ಗೆಲುವು ಸಾಧಿಸಿವೆ. ಹಾಗೆಯೇ ಹಾವೇರಿ ಜಿಲ್ಲೆಯ ಗುತ್ತಲ ಪಟ್ಟಣ ಪಂಚಾಯಿತಿ 18 ವಾರ್ಡ್ ಗಳ ಪೈಕಿ ಕಾಂಗ್ರೆಸ್ 11 ಬಿಜೆಪಿ 6 ಇತರೇ 1ರಲ್ಲಿ ಗೆಲುವು ಸಾಧಿಸಿದೆ.
ಅದೇ ರೀತಿ ಸಚಿವ ಬಿ.ಶ್ರೀರಾಮುಲುಗೆ ಚಿತ್ರದುರ್ಗದ ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಕಾಂಗ್ರೆಸ್ ಮಡಿಲಿಗೆ ಹೋಗುವ ಮೂಲಕ ಮುಖಭಂಗವಾಗಿದೆ. ನಾಯಕನಹಟ್ಟಿ ಪ.ಪಂ.ನ 16 ವಾರ್ಡ್ ಗಳಲ್ಲಿ ಕಾಂಗ್ರೆಸ್ 9, ಪಕ್ಷೇತರ ಅಭ್ಯರ್ಥಿಗಳೂ 3 ವಾರ್ಡ್ ಗಳಲ್ಲಿ ಗೆಲುವು ಸಾಧಿಸಿದ್ದು, ಬಿಜೆಪಿ ಖಾತೆ ತೆರೆಯದೆ ಬಿ.ಶ್ರೀರಾಮುಲುಗೆ ಮುಖಭಂಗ ಅನುಭವಿಸಿದ್ದಾರೆ.
ಬೆಳಗಾವಿ ಜಿಲ್ಲೆ ಯಕ್ಸಂಬಾ ಪ.ಪಂ ಕಾಂಗ್ರೆಸ್ ತೆಕ್ಕೆಗೆ. 17ವಾರ್ಡ್ ಗಳ ಪೈಕಿ ಕಾಂಗ್ರೆಸ್ 10, ಬಿಜೆಪಿ 1ರಲ್ಲಿ ಗೆಲುವು ಸಾಧಿಸಿದ್ದು ಸಚಿವೆ ಶಶಿಕಲಾ ಜೊಲ್ಲೆ ಸ್ವಗ್ರಾಮದಲ್ಲೇ ಕಾಂಗ್ರೆಸ್ ಗೆ ಗೆಲುವು ದೊರಕಿದೆ.
ಇನ್ನು ಯಾದಗಿರಿಯ ಕಕ್ಕೇರಾ 4 ವಾರ್ಡ್ ಗಳಲ್ಲಿ ಕಾಂಗ್ರೆಸ್ ಗೆದ್ದಿದೆ. ಕುಕನೂರು ಪಟ್ಟಣ ಪಂಚಾಯತ್ನ ಸ್ವ ಕ್ಷೇತ್ರದಲ್ಲಿ ಸಚಿವ ಹಾಲಪ್ಪಗೆ ತೀವ್ರ ಮುಖಭಂಗ ವಾಗಿದ್ದು ಕಾಂಗ್ರೆಸ್ 10, ಬಿಜೆಪಿ 9 ರಲ್ಲಿ ಗೆಲುವು ಸಾಧಿಸಿದೆ.
ಇನ್ನು ಕೊಪ್ಪಳದ ಕಾರಟಗಿ ಪುರಸಭೆಯಲ್ಲಿ ಕಾಂಗ್ರೆಸ್ 12 ಬಿಜೆಪಿ 10 ಇತರೆ1 ವಾರ್ಡ್ ಗಳಲ್ಲಿ ಜಯಸಾಧಿಸಿವೆ.
ಮತ್ತೊಂದೆಡೆ ಉಡುಪಿ ಜಿಲ್ಲೆ ಕಾಪು ಪುರಸಭೆ ಬಿಜೆಪಿ ಪಾಲಾಗಿದೆ. 23 ವಾರ್ಡ್ ಪೈಕಿ ಬಿಜೆಪಿ 12, ಕಾಂಗ್ರೆಸ್ 7, ಎಸ್ಡಿಪಿಐ 3, ಜೆಡಿಎಸ್ 1 ವಾರ್ಡ್ನಲ್ಲಿ ಗೆಲುವು ಸಾಧಿಸಿದೆ.
ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಹಾರೂಗೇರಿ ಪುರಸಭೆ ಬಿಜೆಪಿ ಪಾಲಾಗಿದೆ. 23 ವಾರ್ಡ್ಗಳ ಪೈಕಿ 15ವಾರ್ಡ್ಗಳಲ್ಲಿ ಜಯ ಸಾಧಿಸಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಕ್ಕಿದೆ.
ಕಾಂಗ್ರೆಸ್ 7, ಬಿಜೆಪಿ 15, ಪಕ್ಷೇತರ 1 ಸ್ಥಾನ ಪಡೆದಿದ್ದಾರೆ. ಕಕ್ಕೇರಾ ಪುರಸಭೆಯಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿದೆ. ಬಿಜೆಪಿ ಶಾಸಕ ರಾಜುಗೌಡಗೆ ಬಾರಿ ಮುಖಭಂಗವಾಗಿದೆ.
ಬಿಡದಿ ಪುರಸಭೆಯಲ್ಲಿ ಜೆಡಿಎಸ್ ಗೆಲುವು ಸಾಧಿಸಿದೆ. 23 ವಾರ್ಡ್ ಗಳ ಪೈಕಿ 14 ವಾರ್ಡ್ ಗಳಲ್ಲಿ ಜೆಡಿಎಸ್ ಗೆ ಗೆಲುವು ಸಿಕ್ಕಿದೆ.
9 ವಾರ್ಡ್ಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಬಿಡದಿ ಪುರಸಭೆಯಲ್ಲಿ ಖಾತೆ ತೆರೆಯುವಲ್ಲಿ ಬಿಜೆಪಿ ವಿಫಲವಾಗಿದೆ