ಚಿಕ್ಕೋಡಿ prajakiran.com : ಅಪರಿಚಿತನಿಂದ ಇಬ್ಬರ ಮೇಲೆ ಫೈರಿಂಗ್ ನಡೆದ ಘಟನೆ ಚಿಕ್ಜೋಡಿಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ
ಯಮಕನಮರಡಿ ಗ್ರಾಮದ
ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಫೈರಿಂಗ್ ಮಾಡಲಾಗಿದೆ.
ಗ್ರಾಮ ಪಂಚಾಯತಿ ಚುನಾವಣೆ ವೈಷಮ್ಯ ಹಿನ್ನೆಲೆ ಫೈರಿಂಗ್ ನಡೆದಿರುವ ಶಂಕೆ ಇದೆ.
ಫೈರಿಂಗ್ ನಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಕಿರಣ ರಜಪೂತ ಹಾಗೂ ಭರಮಾ ದೂಪದಾಳೆ ಎಂಬುವರ ಮೇಲೆ ಫೈರಿಂಗ್ ಮಾಡಲಾಗಿದೆ.
ಭರಮಾ ದೂಪದಾಳೆಗೆ ಗಂಭೀರ ಗಾಯಗಳಾಗಿದ್ದು, ಕಿರಣ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಮಾಸ್ಕ ಹಾಕಿಕೊಂಡು 7 ಅಡಿ ಅಂತರದಿಂದ ಫೈರಿಂಗ್ ಮಾಡಿದ ಅಪರಿಚಿತನ ಪತ್ತೆಗೆ ಹುಡುಕಾಟದ ನಡೆಸಲಾಗುತ್ತಿದೆ.
DSP ಹಾಗೂ CPI ನೇತೃತ್ವದ ತಂಡ ಕಾರ್ಯಾಚರಣೆ ನಡೆಸುತ್ತಿದೆ.
ದಾಳಿಗೆ ಯಾವ ವೆಪನ್ ಬಳಸಲಾಗಿದೆ ಎಂಬುವುದರ ಕುರಿತು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಇನ್ನು ಪ್ರಕರಣದ ಬಗ್ಗೆ ಮಾಹಿತಿ ನೀಡಿದ ಬೆಳಗಾವಿ ಎಸ್. ಪಿ. ಲಕ್ಷ್ಮಣ ನಿಂಬರಗಿ,
ಈ ಕುರಿತು
ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.