ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ‘ಕೈ’ ಮೇಲುಗೈ
ಶಿವಮೊಗ್ಗ prajakiran.com : ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಬರೋಬ್ಬರಿ 27 ವರ್ಷದ ನಂತರ ಕಾಂಗ್ರೆಸ್ ಬಹುಮತ ಗಳಿಸಿದೆ.
ಕಾಂಗ್ರೆಸ್ನಿಂದ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಈಚೆಗೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ಆರ್.ಎಂ.ಮಂಜುನಾಥ ಗೌಡ, ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್ ಭರ್ಜರಿ ಪ್ರಚಾರ ನಡೆಸಿದ್ದರು.
ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಬಿಜಿಪಿ 6 ಸ್ಥಾನಗಳಲ್ಲಿ ಗೆಲುವನ್ನು ಸಾಧಿಸಿದರೆ, ಕಾಂಗ್ರೆಸ್ 9 ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ.
ಆ ಮೂಲಕ ಕಾಂಗ್ರೆಸ್ ಭರ್ಜರಿ ಯಶಸ್ಸು ಗಳಿಸಿದರೆ, ಬಿಜೆಪಿಯ ಭದ್ರಕೋಟೆ ಹಾಗೂ ಸಿಎಂ ಯಡಿಯೂರಪ್ಪ ತವರು ಜಿಲ್ಲೆಯಲ್ಲಿ ನೆಲ ಕಚ್ಚಿದೆ.