ರಾಜ್ಯ

ಧಾರವಾಡದಲ್ಲಿ ಜಾಗಟೆ ಬಾರಿಸುವ ಮೂಲಕ ರೈತರ ಹೋರಾಟಕ್ಕೆ ಸಾಥ್

ಧಾರವಾಡ prajakiran.com : ರಾಷ್ಟ್ರದ ರಾಜಧಾನಿ ನವದೆಹಲಿಯಲ್ಲಿ ರೈತರು ಕಳೆದ ಹಲವು ದಿನಗಳಿಂದ ನಿರಂತರವಾಗಿ ಹಗಲು ರಾತ್ರಿ ಪ್ರತಿಭಟನೆ ನಡೆಸುತ್ತಿದ್ದರೂ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರ ಕ್ಯಾರೆ ಎನ್ನದಿರುವುದು ತೀವ್ರ ನೋವಿನ ಸಂಗತಿಯಾಗಿದೆ ಎಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್.ನೀರಲಕೇರಿ ಕಿಡಿಕಾರಿದರು.

ಅವರು ಭಾನುವಾರ ರಾತ್ರಿ ರೈತರ ಹೋರಾಟ ಬೆಂಬಲಿಸಿ ಧಾರವಾಡದ
ಕಲಾಭವನದ ಎದುರಿನ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಎದುರು ಜಾಗಟೆ ಬಾರಿಸುವ ಮೂಲಕ ತಮ್ಮ
ಆಕ್ರೋಶ ವ್ಯಕ್ತಪಡಿಸಿದರು.

ಒಂದು ಗಂಟೆಗಳ ಕಾಲ ಮನ್ ಕೀ ಬಾತ್ ಮಾತನಾಡಿ ಬುರುಡೆ ಬಿಡುವ ಬದಲು ದೇಶದ ಎಂಬತ್ತು ಕೋಟಿ ರೈತರ ಅಳಲು ಆಲಿಸಬೇಕು ಎಂದು ಹೇಳಿದರು.

ಜನ ವಿರೋಧಿ, ರೈತ ವಿರೋಧಿ ಹಾಗೂ ಕಾರ್ಮಿಕ ವಿರೋಧಿ ಕಾನೂನುಗಳ ಮೂಲಕ ಬಂಡವಾಳ ಶಾಹಿಗಳ ಹಿತ ಕಾಪಾಡುತ್ತಿದ್ದಾರೆ ಎಂದು ದೂರಿದರು.

ಈ ಮೂರು ಕಾಯ್ದೆಯನ್ನು ತಕ್ಷಣ ವಾಪಾಸ್ ಪಡೆಯಬೇಕು ಎಂದು ಆಗ್ರಹಿಸಿದರು.
ಈ ಪ್ರತಿಭಟನೆಯಲ್ಲಿ ಶ್ರೀಶೈಲ ಕಮತರ, ರವಿ ಗೌಳೆ, ಸಲೀಂ ಸಂಗನಮುಲ್ಲಾ, ವಿಲ್ಸನ್ ಫೆರ್ನಾಂಡಿಸ್, ಐ.ಬಿ. ನಿಡಗುಂದಿ ,ಗೋನ್ಸಲ್ವಿಸ್, ವಿನಾಯಕ ಕಂಬಳಿ, ರಮೇಶ ಕಾಂಬ್ಳೆ ಇನ್ನಿತರರು ಭಾಗವಹಿಸಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *