ಹುಬ್ಬಳ್ಳಿ prajakiran.com : ಪೂರಿ ಬಾಜಿಯಲ್ಲಿ ಹಲ್ಲಿ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 90 ಸಾವಿರ ರೂ. ಪರಿಹಾರ ನೀಡುವಂತೆ ಧಾರವಾಡ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶ ನೀಡಿದೆ.
ಹುಬ್ಬಳ್ಳಿ ತಾಲೂಕಿನ ವರೂರು ಗ್ರಾಮದ ಹೋಟೆಲ್ ಒಂದರಲ್ಲಿ ಪೂರೈಸಿದ್ದ ಪೂರಿ-ಬಾಜಿಯಲ್ಲಿ ಹಲ್ಲಿ ಬಿದ್ದಿದ್ದ ಪ್ರಕರಣ ಇದಾಗಿದೆ.
2018 ರ ಸೆಪ್ಟೆಂಬರ್ 26 ರಂದು ಹುಬ್ಬಳ್ಳಿಯ ವರೂರಿನ ಕಾಮತ್ ಉಪಚಾರ ಹೋಟೆಲ್ಗೆ ಬೆಳಗಿನ ಉಪಹಾರಕ್ಕಾಗಿ ಹೋಗಿದ್ದ ಗ್ರಾಹಕರಾದ ವಿನಾಯಕ ಮತ್ತು ಸಹನಾ.
ಪೂರಿ ಭಾಜಿ ತಿಂಡಿಗೆ ಆರ್ಡರ್ ನೀಡಿದ್ದ ದಂಪತಿ.
ಉಪಹಾರದಲ್ಲಿ ಬೆಂದ ಹಲ್ಲಿ ಇರುವುದನ್ನು ಗಮನಿಸಿದ ದಂಪತಿ.
ಈ ಬಗ್ಗೆ ನಿರ್ಲಕ್ಷ್ಯ ಧೋರಣೆ ತಾಳಿದ್ದ ಹೋಟೆಲ್ ಸಿಬ್ಬಂದಿಯಿಂದಾಗಿ
ವಿಷಪೂರಿತ ಉಪಹಾರ ಸೇವಿಸಿದ್ದ ಗ್ರಾಹಕ ವಿನಾಯಕ ಅವರಿಗೆ ಹೊಟ್ಟೆನೋವು, ವಾಂತಿ ಕಾಣಿಸಿಕೊಂಡಿತ್ತು.
ಶಿಗ್ಗಾಂವ ಹಾಗೂ ಹುಬ್ಬಳ್ಳಿಯ ತತ್ವದರ್ಶ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.
ಈ ಕುರಿತು ಧಾರವಾಡದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರು ನೀಡಿದ್ದರು.
ಈ ದೂರಿನ ವಿಚಾರಣೆ ನಡೆಸಿದ ಆಯೋಗ, ಕಾಮತ್ ಉಪಚಾರ ಹೊಟೇಲ್ನವರಿಂದ ಗ್ರಾಹಕರಿಗೆ ಸೇವಾ ನ್ಯೂನ್ಯತೆ ಕಂಡು ಬಂದ ಹಿನ್ನೆಲೆಯಲ್ಲಿ ಹೊಟೇಲ್ನವರು ಇಬ್ಬರೂ ಗ್ರಾಹಕರಿಗೆ ಒಟ್ಟು 90 ಸಾವಿರ ರೂಪಾಯಿ ಪರಿಹಾರ ನೀಡಬೇಕು ಎಂದು ಆದೇಶ ಹೊರಡಿಸಿದೆ.
ಆಯೋಗದ ಅಧ್ಯಕ್ಷರಾದ ಈಶಪ್ಪ ಭೂತೆ, ಸದಸ್ಯರಾದ ಪಿ.ಸಿ.ಹಿರೇಮಠ ಮತ್ತು ವಿ.ಎ. ಬೋಳಶೆಟ್ಟಿ ಅವರಿಂದ ಈ ತೀರ್ಪು ಹೊರಬಿದ್ದಿದೆ.