ರಾಜ್ಯ

ರಾಜ್ಯದಲ್ಲಿಂದು 270 ಜನರು ಮಹಾಮಾರಿ ಕೊರೋನಾಗೆ ಬಲಿ

ಬೆಂಗಳೂರು prajakiran.com : ಕೊರೋನಾ ಎರಡನೇ ಅಲೆ ದೇಶವನ್ನೇ ಬೆಚ್ಚಿಬೀಳಿಸಿದೆ.

ಈ ಪರಿಸ್ಥಿತಿಯ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಈಗಾಗಲೇ 14 ದಿನಗಳ ಕಾಲ ಲಾಕ್‌ಡೌನ್ ಮಾಡಿದೆ.

ಅಷ್ಟಾದರೂ ರಾಜ್ಯದಲ್ಲಿಂದು ಕೊರೋನಾ ಸೋಂಕಿನ ಪ್ರಮಾಣ 30 ಸಾವಿರ ಗಡಿ ದಾಡಿದೆ.

ಇಂದು 35024 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1474846ಕ್ಕೆ ಏರಿಕೆಯಾಗಿದೆ.

ರಾಜ್ಯಾದ್ಯಂತ ಇಂದು ಒಂದೇ ದಿನ 270 ಜನರು ಕೋವಿಡ್ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ಒಟ್ಟು ಸಾವನ್ನಪ್ಪಿದವರ ಸಂಖ್ಯೆ 15306ಕ್ಕೆ ಏರಿಕೆಯಾಗಿದೆ.

ಇನ್ನೂ 14142ರಷ್ಟು ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು 1110025 ಜನರು ಚೇತರಿಸಿಕೊಂಡಿದ್ದಾರೆ.

ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 349496ಕ್ಕೆ ಏರಿಕೆಯಾಗಿದೆ. 2431 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *