ಬೆಂಗಳೂರು prajakiran.com : ಕೊರೋನಾ ಎರಡನೇ ಅಲೆ ದೇಶವನ್ನೇ ಬೆಚ್ಚಿಬೀಳಿಸಿದೆ.
ಈ ಪರಿಸ್ಥಿತಿಯ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಈಗಾಗಲೇ 14 ದಿನಗಳ ಕಾಲ ಲಾಕ್ಡೌನ್ ಮಾಡಿದೆ.
ಅಷ್ಟಾದರೂ ರಾಜ್ಯದಲ್ಲಿಂದು ಕೊರೋನಾ ಸೋಂಕಿನ ಪ್ರಮಾಣ 30 ಸಾವಿರ ಗಡಿ ದಾಡಿದೆ.
ಇಂದು 35024 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1474846ಕ್ಕೆ ಏರಿಕೆಯಾಗಿದೆ.
ರಾಜ್ಯಾದ್ಯಂತ ಇಂದು ಒಂದೇ ದಿನ 270 ಜನರು ಕೋವಿಡ್ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ಒಟ್ಟು ಸಾವನ್ನಪ್ಪಿದವರ ಸಂಖ್ಯೆ 15306ಕ್ಕೆ ಏರಿಕೆಯಾಗಿದೆ.
ಇನ್ನೂ 14142ರಷ್ಟು ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು 1110025 ಜನರು ಚೇತರಿಸಿಕೊಂಡಿದ್ದಾರೆ.
ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 349496ಕ್ಕೆ ಏರಿಕೆಯಾಗಿದೆ. 2431 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.