ಬೆಂಗಳೂರು prajakiran.com : ರಾಜ್ಯದಲ್ಲಿ ಬುಧವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ55 ಜನ ಸಾವನ್ನಪ್ಪಿದ್ದಾರೆ.
ಮತ್ತೆ ಹೊಸದಾಗಿ 4764 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 75833 ಕ್ಕೆ ಏರಿಕೆಯಾಗಿದೆ.
ಇಂದು ರಾಜ್ಯದಲ್ಲಿ1780 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 27239 ಜನ ಗುಣಮುಖರಾಗಿದ್ದು, 47069 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 618 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ ಬುಧವಾರವೂ 55 ಜನ ಮೃತಪಟ್ಟಿದ್ದು, ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 1519 ಕ್ಕೆ ಏರಿಕೆಯಾದಂತಾಗಿದೆ.
ಬುಧವಾರ ಪತ್ತೆಯಾದ ಪ್ರಕರಣಗಳಲ್ಲಿ ರಾಜ್ಯದ ರಾಜಧಾನಿ ಬೆಂಗಳೂರು ನಗರ ದಲ್ಲಿಯೇ ಅತಿ ಹೆಚ್ಚು ಸೋಂಕಿತರು ಕಂಡು ಬಂದಿದ್ದಾರೆ.
ಬೆಂಗಳೂರಿನಲ್ಲಿ 2050 ಬರೋಬ್ಬರಿ ಜನ ಸೋಂಕಿತರು ಕಂಡು ಬಂದಿರುವುದು ಬೆಂಗಳೂರಿಗರನ್ನು ಮತ್ತೆ ಬೆಚ್ಚಿಬೀಳಿಸುವಂತೆ ಮಾಡಿದೆ.
ಇನ್ನೂಳಿದಂತೆ ಉಡುಪಿ 281, ಬೆಳಗಾವಿ 219, ಕಲಬುರಗಿ 175, ದಕ್ಷಿಣ ಕನ್ನಡ 162, ಧಾರವಾಡ 158, ಮೈಸೂರು 145, ಬೆಂಗಳೂರು ಗ್ರಾಮಾಂತರ 139, ರಾಯಚೂರು 135, ಬಳ್ಳಾರಿ 134, ಚಿಕ್ಕಬಳ್ಳಾಪುರ 110, ದಾವಣಗೆರೆ 96, ಕೋಲಾರ 88, ಚಿಕ್ಕಮಗಳೂರು 82, ಬೀದರ 77, ಹಾಸನ 72, ಗದಗ 71, ಬಾಗಲಕೋಟೆ 70, ಉತ್ತರಕನ್ನಡ 63, ಶಿವಮೊಗ್ಗ 59, ವಿಜಯಪುರ ಹಾಗೂ ತುಮಕೂರು ತಲಾ 52, ಹಾವೇರಿ 50, ರಾಮನಗರ 45, ಯಾದಗಿರಿ 43, ಚಿತ್ರದುರ್ಗ 40, ಮಂಡ್ಯ 37, ಚಾಮರಾಜನಗರ 31, ಕೊಪ್ಪಳ 21, ಕೊಡಗು 7 ಹೀಗೆ ಒಟ್ಟು 30 ಜಿಲ್ಲೆಗಳಲ್ಲಿ ಕರೋನಾ ವೈರಸ್ ತನ್ನ ಅಟ್ಟಹಾಸ ಮೆರೆದಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸಾವಿನ ರಣಕೇಕೆ ರಾಜ್ಯದಲ್ಲಿ ಬುಧವಾರವೂ ಮುಂದುವರೆದಿದ್ದು, ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಬರೋಬ್ಬರಿ 15 ಜನ ಸಾವನ್ನಪ್ಪಿದ್ದಾರೆ.
ಧಾರವಾಡ ಹಾಗೂ ಮೈಸೂರು ತಲಾ 5, ಹಾವೇರಿ 4, ದಕ್ಷಿಣಕನ್ನಡ, ಬೀದರ, ಹಾಸನ ಹಾಗೂ ಉತ್ತರಕನ್ನಡ ತಲಾ 3, ರಾಯಚೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬಾಗಲಕೋಟೆ, ತುಮಕೂರು ತಲಾ 2, ಚಾಮರಾಜನಗರ, ಕೋಲಾರ, ಕಲಬುರಗಿ ಹಾಗೂ ಉಡುಪಿ ತಲಾ ಒಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.