ಬೆಂಗಳೂರು prajakiran.com : ರಾಜ್ಯದಲ್ಲಿ ಭಾನುವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 91 ಜನ ಸಾವನ್ನಪ್ಪಿದ್ದಾರೆ.
ಮತ್ತೆ ಹೊಸದಾಗಿ 4120 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 63772 ಕ್ಕೆ ಏರಿಕೆಯಾಗಿದೆ.
ಇಂದು ರಾಜ್ಯದಲ್ಲಿ 1290 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 23065 ಜನ ಗುಣಮುಖರಾಗಿದ್ದು, 39370 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 579 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ ಭಾನುವಾರವೂ 91 ಜನ ಮೃತಪಟ್ಟಿದ್ದು, ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 1331 ಕ್ಕೆ ಏರಿಕೆಯಾದಂತಾಗಿದೆ.
ಭಾನುವಾರ ಪತ್ತೆಯಾದ ಪ್ರಕರಣಗಳಲ್ಲಿ ರಾಜ್ಯದ ರಾಜಧಾನಿ ಬೆಂಗಳೂರು ನಗರ ದಲ್ಲಿಯೇ ಅತಿ ಹೆಚ್ಚು ಸೋಂಕಿತರು ಕಂಡು ಬಂದಿದ್ದಾರೆ.
ಬೆಂಗಳೂರಿನಲ್ಲಿ ನಿನ್ನೇ 2125 ಜನ ಸೋಂಕಿತರಿದ್ದರೆ ಇಂದು ಬರೋಬ್ಬರಿ 2156 ಜನ ಸೋಂಕಿತರು ಕಂಡು ಬಂದಿರುವುದು ಬೆಂಗಳೂರಿಗರನ್ನು ಮತ್ತೆ ಬೆಚ್ಚಿಬೀಳಿಸುವಂತೆ ಮಾಡಿದೆ.
ಇನ್ನೂಳಿದಂತೆ ದಕ್ಷಿಣ ಕನ್ನಡ 285, ವಿಜಯಪುರ 171, ಚಿಕ್ಕಬಳ್ಳಾಪುರ 135, ಉಡುಪಿ 134, ಧಾರವಾಡ 126, ಮೈಸೂರು 110, ಶಿವಮೊಗ್ಗ 104, ಬೆಳಗಾವಿ 87, ಬಳ್ಳಾರಿ 73, ಬೆಂಗಳೂರು ಗ್ರಾಮಾಂತರ 70, ಕಲಬುರಗಿ ಹಾಗೂ ಉತ್ತರ ಕನ್ನಡ 69, ದಾವಣಗೆರೆ 62, ಬಾಗಲಕೋಟೆ 60, ಹಾವೇರಿ 54, ಬೀದರ 45, ಹಾಸನ 43, ಚಿಕ್ಕಮಗಳೂರು 41, ರಾಯಚೂರು 32, ಗದಗ 30, ರಾಮನಗರ 29, ಕೋಲಾರ ಹಾಗೂ ಚಾಮರಾಜನಗರ ತಲಾ 25, ತುಮಕೂರು ಹಾಗೂ ಕೊಪ್ಪಳ ತಲಾ 19, ಚಿತ್ರದುರ್ಗ 17, ಕೊಡಗು 13, ಯಾದಗಿರಿ 10, ಮಂಡ್ಯ 7 ಹೀಗೆ ಒಟ್ಟು 30 ಜಿಲ್ಲೆಗಳಲ್ಲಿ ಕರೋನಾ ವೈರಸ್ ತನ್ನ ಅಟ್ಟಹಾಸ ಮೆರೆದಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸಾವಿನ ರಣಕೇಕೆ ರಾಜ್ಯದಲ್ಲಿ ಭಾನುವಾರವೂ ಮುಂದುವರೆದಿದ್ದು, ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಬರೋಬ್ಬರಿ 36 ಜನ ಸಾವನ್ನಪ್ಪಿದ್ದಾರೆ.
ಮೈಸೂರು 11, ಕೋಲಾರ 5, ಕೊಪ್ಪಳ, ಧಾರವಾಡ ಹಾಗೂ ತಲಾ 4, ಬಳ್ಳಾರಿ, ಕಲಬುರಗಿ ಹಾಗೂ ಬೀದರ ತಲಾ 3, ಮಂಡ್ಯ, ತುಮಕೂರು, ಹಾಸನ, ಹಾವೇರಿ, ಬಾಗಲಕೋಟೆ, ದಾವಣಗೆರೆ, ಬೆಳಗಾವಿ ತಲಾ 2, ದಕ್ಷಿಣ ಕನ್ನಡ, ವಿಜಯಪುರ, ಉಡುಪಿ, ಚಿಕ್ಕಮಗಳೂರು ತಲಾ ಒಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.