ಬೆಂಗಳೂರು prajakiran.com :
ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಭೀಕರವಾಗಿ ಹರಡುತ್ತಿದೆ.
ಅದರಲ್ಲೂ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಸಾಗಿದೆ.
ಶನಿವಾರ ಸಹ ಒಂದೇ ದಿನ 40990 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ.
ಇಂದು ಕೂಡ 271 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ 15794ಗೆ ಏರಿಕೆಯಾಗಿದೆ.
ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶನಿವಾರ ಬಿಡುಗಡೆಗೊಳಿಸಿರುವ ಹೆಲ್ತ್ ಬುಲೆಟಿನ್ ಮಾಹಿತಿ ಪ್ರಕಾರ ಇಂದು ಒಂದೇ ದಿನ 18341 ಜನರು ಬಿಡುಗಡೆಯಾಗಿದ್ದಾರೆ.
ರಾಜ್ಯದಲ್ಲಿ ಈವರೆಗೆ 1143250 ಜನ ಕೋವಿಡ್ ನಿಂದ ಗುಣಮುಖರಾಗಿದ್ದು , 405068 ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ
ಈವರೆಗೆ ರಾಜ್ಯದಲ್ಲಿ 15794 ಜನ ಸಾವನ್ನಪ್ಪಿದ್ದಾರೆ.
ಅದೇ ರೀತಿ ಧಾರವಾಡ ಜಿಲ್ಲೆಯಲ್ಲಿ ಶನಿವಾರ 540 ಪ್ರಕರಣ ವರದಿಯಾಗಿದ್ದು, ನಾಲ್ಕು ಜನ ಸಾವನ್ನಪ್ಪಿದ್ದಾರೆ ಎಂದು ಬುಲೆಟಿನ್ ತಿಳಿಸಿದೆ.
ಆ ಮೂಲಕ ಧಾರವಾಡ ಜಿಲ್ಲೆಯ ಕರೋನಾ ಸೋಂಕಿತರ ಸಂಖ್ಯೆ 30979 ಕ್ಕೆ ಎರಿಕೆಯಾಗಿದೆ.
ಇದೇ ವೇಳೆ ಸಮಾಧಾನದ ಸಂಗತಿಯೆಂದರೆ ಒಟ್ಟು 458 ಜನ ಗುಣಮುಖರಾಗಿ ಮನೆಗೆ ಹೆಜ್ಜೆ ಹಾಕಿದ್ದಾರೆ.