ಮುಂಬೈ prajakiran.com : ಕೊರೋನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಮೇ.31ರ ವರೆಗೆ ಲಾಕ್ಡೌನ್ನ್ನು ರಾಜ್ಯಾದ್ಯಂತ ಮುಂದುವರಿಸಲಾಗಿದೆ.
ಕೊರೋನಾ ನಿಯಂತ್ರಣಕ್ಕೆ ತರಲು ರಾಜ್ಯದಲ್ಲಿ ಮೇ.16 ರಿಂದ ಮೇ.31ರ ವರೆಗೆ ಲಾಕ್ಡೌನ್ ವಿಸ್ತರಿಸುವುದಾಗಿ ಬುಧವಾರ ನಡೆದ ಸಚಿವ ಸಂಪುಟದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಸಿಎಂ ಉದ್ಧವ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಪ್ರತಿದಿನ ಸುಮಾರು 50 ಸಾವಿರ ಪ್ರಕರಣಗಳು ದಾಖಲಾಗುತ್ತಿದ್ದು, 800ಕ್ಕೂ ಹೆಚ್ಚು ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.