ಧಾರವಾಡ ಪ್ರಜಾಕಿರಣ.ಕಾಮ್ : ಕಳೆದ ಹಲವು ದಶಕಗಳಿಂದ ಕೇಳಿ ಬರುತ್ತಿರುವ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಕೂಗು ಇತ್ತೀಚೆಗೆ ಮತ್ತೆ ತೀವ್ರ ಸ್ವರೂಪ ಪಡೆದಿದೆ.
ಮಹಾನಗರ ಪಾಲಿಕೆ ಮಾಜಿ ಸದಸ್ಯರು ಆಗಿರುವ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ದೀಪಕ ಚಿಂಚೋರೆ ನೇತೃತ್ವದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಯಿತು.
ರಾಜಕೀಯ ಮುಖಂಡರು ತಮ್ಮ ಪ್ರಭಾವ ಬಳಿಸಿ, ಅನುದಾನ ಎಲ್ಲಾ ಹುಬ್ಬಳ್ಳಿ ಪಾಲಾಗುವಂತೆ ಮಾಡುತ್ತಿದ್ದಾರೆ. ಅಲ್ಲದೆ, ಹುಬ್ಬಳ್ಳಿಯ ಅಭಿವೃದ್ಧಿಗೆ ತೋರುವ ಕಾಳಜಿ ಧಾರವಾಡಕ್ಕೆ ತೋರುತ್ತಿಲ್ಲ ಎಂದು ದೀಪಕ ಚಿಂಚೋರೆ ಆರೋಪಿಸಿದರು.
ರಾಜಕೀಯ ಲಾಭಕ್ಕಾಗಿ ಧಾರವಾಡ ನಗರಕ್ಕೆ ಎಷ್ಟು ವರ್ಷಗಳ ಕಾಲ ಅನ್ಯಾಯ ಎಸಗುತ್ತಿರಿ ಎಂದು ಕಿಡಿಕಾರಿದರು.