ಧಾರವಾಡ prajakiran.com : ಜಿಲ್ಲೆಯ ಕೋವಿಡ್ ನಿಯಂತ್ರಣಕ್ಕಾಗಿ ಅಂಬುಲೆನ್ಸ್ ಗಳ ನಿರ್ವಹಣೆ ಹಾಗೂ ಖಾಸಗಿ ಆಸ್ಪತ್ರೆಗಳ ಹಾಸಿಗೆಗಳ ಸಂಖ್ಯೆಗಳ ನಿರ್ವಹಣೆಗೆ ಎರಡು ಪ್ರತ್ಯೇಕ ತಂಡಗಳನ್ನು ರಚಿಸಿ ಜಿಲ್ಲಾಧಿಕಾರಿಗಳಾದ ನಿತೇಶ ಪಾಟೀಲ ಆದೇಶ ಹೊರಡಿಸಿದ್ದಾರೆ.
ಅಂಬುಲೆನ್ಸ್ ನಿರ್ವಹಣೆ ತಂಡ : ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಕೋವಿಡ್ ಸೋಂಕಿತರನ್ನು ಸ್ಥಳಾಂತರಿಸಲು ಭೂ ದಾಖಲೆಗಳ ಉಪನಿರ್ದೇಶಕಿ ನಜ್ಮಾ ಪೀರಜಾದೆ-೯೩೪೧೦೧೫೬೫೬, ಮಹಾನಗರಪಾಲಿಕೆ ಉಪ ಆಯುಕ್ತ ಶಂಕರಾನಂದ ಬನಶಂಕರಿ -೯೨೪೨೦೧೪೯೪೪ ಅವರನ್ನು ಸಂಪರ್ಕಿಸಬಹುದು. ಜಿಲ್ಲೆಯ ಉಳಿದ ತಾಲ್ಲೂಕುಗಳಲ್ಲಿ ಅಲ್ಲಿನ ತಹಸೀಲ್ದಾರ ಅವರನ್ನು ಸಂಪರ್ಕಿಸಬಹುದು.
ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಲಭ್ಯತೆ ಕುರಿತ ಮಾಹಿತಿ ನಿರ್ವಹಣೆ: ಹೆಸ್ಕಾಂ ಪ್ರಧಾನ ವ್ಯವಸ್ಥಾಪಕರಾದ ಇಬ್ರಾಹಿಂ ಮೈಗೂರ – ೯೯೮೬೭೧೬೬೬೬, ಡಿಮ್ಹಾನ್ಸ್ ಮುಖ್ಯ ಆಡಳಿತಾಧಿಕಾರಿ ಷಣ್ಮುಖ-೮೧೦೫೦೭೭೩೩೩, ಜಿಲ್ಲಾ ಆರ್ ಸಿ ಹೆಚ್ ಅಧಿಕಾರಿ ಡಾ.ಎಸ್.ಎಂ.ಹೊನಕೇರಿ-೮೨೭೭೩೩೨೯೭೦ ಅವರನ್ನು ಸಂಪರ್ಕಿಸಬಹುದು.
ಲಕ್ಷಣ ರಹಿತ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರುಗಳಿಗೆ ದಾಖಲಿಸುವ ಮಾಹಿತಿ: ಉಪವಿಭಾಗಾಧಿಕಾರಿ ಮಹ್ಮದ್ ಜುಬೇರ್- ೯೪೪೮೮೨೧೦೯೩, ಸಮಾಜ ಕಲ್ಯಾಣ ಜಂಟಿ ನಿರ್ದೇಶಕ ಎನ್ .ಆರ್.ಪುರುಷೋತ್ತಮ- ೯೮೪೪೮೪೪೯೮೯,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಅಜ್ಜಪ್ಪ ಸೊಗಲದ – ೯೯೦೧೪೧೮೨೮೯, ಅಥವಾ ಜಿಲ್ಲಾಧಿಕಾರಿಗಳ ಕಚೇರಿಯ ಕಂಟ್ರೋಲ್ ರೂಮ್ ೧೦೭೭ (೦೮೩೬), ೦೮೩೬-೨೪೪೫೬೬೬, ವಾಟ್ಸಪ್ ಸಂಖ್ಯೆಗಳಾದ -೯೪೪೯೮೪೭೬೪೬ ಅಥವಾ ೯೪೪೯೮೪೭೬೪೧ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.