ಬೆಂಗಳೂರು prajakiran.com : ರಾಜ್ಯದಲ್ಲಿ ಮಂಗಳವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ110 ಜನ ಸಾವನ್ನಪ್ಪಿದ್ದಾರೆ.
ಮತ್ತೆ ಹೊಸದಾಗಿ 6259 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 1,45,830 ಕ್ಕೆ ಏರಿಕೆಯಾಗಿದೆ.
ಇಂದು ರಾಜ್ಯದಲ್ಲಿ 6777 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 69272 ಜನ ಗುಣಮುಖರಾಗಿದ್ದು, 73846 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 634 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ ಮಂಗಳವಾರವೂ 110 ಜನ ಮೃತಪಟ್ಟಿದ್ದು, ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 2704ಕ್ಕೆ ಏರಿಕೆಯಾದಂತಾಗಿದೆ.
ಮಂಗಳವಾರ ಪತ್ತೆಯಾದ ಪ್ರಕರಣಗಳಲ್ಲಿ ರಾಜ್ಯದ ರಾಜಧಾನಿ ಬೆಂಗಳೂರು ನಗರ ದಲ್ಲಿಯೇ ಅತಿ ಹೆಚ್ಚು ಸೋಂಕಿತರು ಕಂಡು ಬಂದಿದ್ದಾರೆ.
ಬೆಂಗಳೂರಿನಲ್ಲಿ 2035 ಬರೋಬ್ಬರಿ ಜನ ಸೋಂಕಿತರು ಕಂಡು ಬಂದಿರುವುದು ಬೆಂಗಳೂರಿಗರನ್ನು ಮತ್ತೆ ಬೆಚ್ಚಿಬೀಳಿಸುವಂತೆ ಮಾಡಿದೆ.
ಇನ್ನೂಳಿದಂತೆ ಮೈಸೂರು 662, ಕಲಬುರಗಿ 285, ಬಳ್ಳಾರಿ 284, ಬೆಳಗಾವಿ 263, ದಕ್ಷಿಣ ಕನ್ನಡ 225, ದಾವಣಗೆರೆ 191, ಧಾರವಾಡ ಹಾಗೂ ಹಾಸನ 188, ಚಿಕ್ಕಬಳ್ಳಾಪುರ 171, ಉಡುಪಿ 170, ಕೊಪ್ಪಳ 163, ಹಾವೇರಿ, 157, ರಾಯಚೂರು ಹಾಗೂ ಬಾಗಲಕೋಟೆ 144, ಮಂಡ್ಯ 126, ಬೀದರ 114, ಗದಗ 96, ಬೆಂಗಳೂರು ಗ್ರಾಮಾಂತರ 82, ತುಮಕೂರು 78, ಯಾದಗಿರಿ 76, ವಿಜಯಪುರ 71, ರಾಮನಗರ 65, ಚಿಕ್ಕಮಗಳೂರು 63, ಉತ್ತರಕನ್ನಡ ಹಾಗೂ ಚಾಮರಾಜನಗರ 57, ಕೋಲಾರ 46, ಕೊಡಗು 31, ಶಿವಮೊಗ್ಗ 15, ಚಿತ್ರದುರ್ಗ 12 ಹೀಗೆ ಒಟ್ಟು 30 ಜಿಲ್ಲೆಗಳಲ್ಲಿ ಕರೋನಾ ವೈರಸ್ ತನ್ನ ಅಟ್ಟಹಾಸ ಮೆರೆದಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸಾವಿನ ರಣಕೇಕೆ ರಾಜ್ಯದಲ್ಲಿ ಮಂಗಳವಾರವೂ ಮುಂದುವರೆದಿದ್ದು, ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಬರೋಬ್ಬರಿ 30 ಜನ ಸಾವನ್ನಪ್ಪಿದ್ದಾರೆ.
ದಕ್ಷಿಣ ಕನ್ನಡ 13, ಮೈಸೂರು 9, ಧಾರವಾಡ 8, ಉಡುಪಿ 6, ಬಳ್ಳಾರಿ 5, ಶಿವಮೊಗ್ಗ 4, ಚಾಮರಾಜನಗರ, ಬೀದರ ತಲಾ 3, ಕಲಬುರಗಿ, ಹಾಸನ,. ಚಿಕ್ಕಬಳ್ಳಾಪುರ, ರಾಯಚೂರು, ಮಂಡ್ಯ, ಯಾದಗಿರಿ ಚಿಕ್ಕಮಗಳೂರು ತಲಾ 2,ಬೆಳಗಾವಿ, ಕೊಪ್ಪಳ, ಹಾವೇರಿ, ಬಾಗಲಕೋಟೆ, ಗದಗ, ತುಮಕೂರು, ವಿಜಯಪುರ ತಲಾ ಒಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.