ಬೆಳಗಾವಿ prajakiran.com : ದೇಶದಲ್ಲಿ ಕೊರೋನಾ ಮಹಾಮಾರಿ ಅಟ್ಟಹಾಸದಿಂದ ದೀನೆ ದೀನೆ ಜನರು ಭಯಭೀತರಾಗಿದ್ದಾರೆ.ತ
ಇಂತಹ ಸಂದರ್ಭದಲ್ಲಿ ಜನರಿಗೆ ಆತ್ಮಸ್ಥೈರ್ಯ ತುಂಬುವ ಕಾರ್ಯವನ್ನ ಹುಕ್ಕೇರಿ ಹಿರೇಮಠದ ಶ್ರೀ ಷ ಬ್ರ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಈ ದೀನ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಎಮ್ ಜಿ ಹಿರೇಮಠ ಅವರಿಗೆ 150 ಕೋವಿಡ್ ಕಿಟ್ಟನ್ನು ಹಸ್ತಾಂತರ ಮಾಡಿದರು.
ಜಿಲ್ಲೆಯ ತುಂಬಾ 1000 ಕೋವಿಡ್ ಕಿಟ್ಟನ್ನು ನೀಡುವುದಾಗಿ ಶ್ರೀ ಷ ಬ್ರ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ತಿಳಿಸಿದರು.
ಹುಕ್ಕೇರಿ ಹಿರೇಮಠದ ಶ್ರೀ ಗುರುಶಾಂತೇಶ್ವರ ಜಾತ್ರೆಯನ್ನು ರದ್ದು ಮಾಡಿ ಶ್ರೀ ಮಠದಿಂದ ಕೋವಿಡ್ ರೋಗಿಗಳಿಗೆ ಉಚಿತ ಅಂಬುಲೆನ್ಸ ನೀಡುವುದಾಗಿ ಹೇಳಿದರು.
ಹುಕ್ಕೇರಿ ಹಿರೇಮಠದ ಶ್ರೀ ಗಳು ಸದಾ ಸಾಮಾಜಿಕ ಕಾರ್ಯವನ್ನು ಮಾಡುವುದರ ಜೊತೆಗೆ ಕೋವಿಡ್ ಸಂದರ್ಭದಲ್ಲಿ ಕೋವಿಡ್ ಕಿಟ್ಟನ್ನು ನೀಡಿ ಜನರಿಗೆ ಆತ್ಮಸ್ಥೈರ್ಯ ತುಂಬುವ ಕಾರ್ಯವನ್ನ ಮಾಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಎಮ್ ಜಿ ಹಿರೇಮಠ ಅವರು ಹೇಳಿದರು.
ಕೋವಿಡ್ ಕಿಟ್ಟ ಸೇವೆಯನ್ನು ಬುಡಾ ಇಂಜಿನಿಯರ್ ಮಹಾಂತೇಶ ಹಿರೇಮಠ ಅವರು ಮಾಡಿದರು .
ಈ ಸಂದರ್ಭದಲ್ಲಿ ವೀರೆಶ ಹಿರೇಮಠ, ಪವನ ಹಿರೇಮಠ , ಈರಣ್ಣಾ ಗಣಾಚಾರಿ , ಮಹಾಂತೇಶ ಹಿರೇಮಠ ಉಪಸ್ಥಿತರಿದ್ದರು