ಉಡುಪಿ Prajakiran.com : ಹೆಚ್ಚುತ್ತಿರುವ ಕೊರೋನಾ ಸೋಂಕು ಎಲ್ಲರನ್ನು ಮಾನಸಿಕವಾಗಿ, ದೈಹಿಕವಾಗಿ ಕುಗ್ಗಿಸಿದೆ.
ಕಳೆದ ವರ್ಷ ಕೊರೋನಾ ಸೋಂಕಿನ ಆತಂಕದಿಂದ ಹಲವರು ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ ಅಂತಹುದೇ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ.
ಹೆಚ್ಚುತ್ತಿರುವ ಕೊರೋನಾ ಸೋಂಕಿಗೆ ಹೆದರಿ, ಮಾನಸಿಕವಾಗಿ ನೊಂದ ಯುವಕ ಪ್ರಸನ್ನ ಅಲ್ಮೇಡ(26) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕೆಲದಿನಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವಕ, ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದ.
ಮೃತನ ಸಹೋದರ ದೆಹಲಿಯಲ್ಲಿ ಉದ್ಯೋಗ ಮಾಡುತ್ತಿದ್ದು ಅಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ ಆತಂಕದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮಲ್ಪೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.