ಧಾರವಾಡ ಪ್ರಜಾಕಿರಣ.ಕಾಮ್ : ಅಕ್ರಮ ಗೋವು ಸಾಗಾಟ ಮಾಡಲಾಗುತ್ತಿದೆ ಎಂದು ಬಜರಂಗದಳದ ಕಾರ್ಯಕರ್ತರು ಗೂಡ್ಸ್ ವಾಹನ ಹಿಡಿದು ಉಪನಗರ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.
ನಗರದ ಬೆಳಗಾವಿ ರಸ್ತೆಯಲ್ಲಿ ಗೋವುಗಳ ಸಾಗಾಟ ಮಾಡುತ್ತಿದ್ದ ಗೂಡ್ಸ್ ವಾಹನ ಹಿಡಿದು ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾರ್ಯಕರ್ತರು ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಉಪ ನಗರ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.
ಪೊಲೀಸರು ಗೂಡ್ಸ್ ವಾಹನ ಹಾಗೂ ಚಾಲಕ ಹಾಗೂ ಇಬ್ಬರು ಕ್ಲಿನಿರಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ.
ವಾಹನದಲ್ಲಿದ್ದ ಗೋವುಗಳನ್ನು ಸುರಕ್ಷಿತವಾಗಿ ಗೋಶಾಲೆಗೆ ಹಸ್ತಾಂತರ ಮಾಡಿದ್ದಾರೆ.