ಧಾರವಾಡ prajakiran.com :
ಇಪ್ಪತ್ತಕ್ಕೂ ಹೆಚ್ಚು ಗೋವುಗಳ ಅಕ್ರಮ ಸಾಗಾಟ ಪತ್ತೆ ಹಚ್ಚಿ ಧಾರವಾಡದ ಗ್ರಾಮೀಣ ಪೋಲಿಸರಿಗೆ ಶ್ರೀ ರಾಮ ಸೇನೆ ಒಪ್ಪಿಸಿದೆ.
ಧಾರವಾಡದ ನರೇಂದ್ರ ಟೋಲ್ ನಾಖಾ ಬಳಿ ಸೋಮವಾರ ರಾತ್ರಿ ಹಿಡಿದು ಪೋಲಿಸರಿಗೆ ಒಪ್ಪಿಸಲಾಗಿದೆ.
ಶ್ರೀರಾಮ ಸೇನೆ ಕಾರ್ಯಕರ್ತರು ಈ ಮಿಂಚಿನ ಕಾರ್ಯಾಚರಣೆ ನಡೆಸಿ,
ಇಪ್ಪತ್ತಕ್ಕೂ ಹೆಚ್ಚು ಗೋವುಗಳ ರಕ್ಷಣೆ ಮಾಡಿದ್ದಾರೆ.
ಆ ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ ಶ್ರೀರಾಮ ಸೇನೆ ಕಾರ್ಯಕರ್ತರು,
ಇಪ್ಪತ್ತಕ್ಕೂ ಹೆಚ್ಚು ಗೋವುಗಳ ಅಕ್ರಮ ಸಾಗಾಟ ಮಾಡುತ್ತಿದ್ದ ಟೆಂಪೋ ವಶಕ್ಕೆ ಪಡೆದಿದ್ದಾರೆ.
ಅಲ್ಲದೆ, ಟೆಂಪೋ ಚಾಲಕನನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಆತನನ್ನು ವಶಕ್ಕೆ ಪಡೆದು ಪೋಲೀಸರು ವಿಚಾರಣೆ ನಡೆಸಿದ್ದಾರೆ.