ಮೈಸೂರು prajakiran.com : ನಟ ದರ್ಶನ್ ಹೆಸರಿನಲ್ಲಿ ವಂಚನೆಗೆ ಯತ್ನ ನಡೆದಿರುವ ಕುರಿತು ಇಂದು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ನಟ ದರ್ಶನ್, ಈ ಪ್ರಕರಣದ ಕುರಿತು ಸಂಪೂರ್ಣ ಮಾಹಿತಿ ನೀಡಿದರು.
ಕಳೆದ ಏಪ್ರಿಲ್ 9 ರಂದು ಇದು ಆರಂಭವಾಗಿದ್ದು ಆದರೆ ಲಾಕ್ಡೌನ್ ಇದ್ದ ಕಾರಣ ನಾನು ತೋಟದಲ್ಲಿದ್ದೆ.
ನಿರ್ಮಾಪಕ ಉಮಾಪತಿ ಜೂನ್ 13 ರಂದು ನನಗೆ ಕರೆ ಮಾಡಿ 25 ಕೋಟಿ ಲೋನ್ಗೆ ನಾನು ಶ್ಯೂರಿಟಿ ಹಾಕಿರುವ ಬಗ್ಗೆ ಮಾಹಿತಿ ನೀಡಿದ್ದರು. ಅವರೇ ನನ್ನ ಹಾಗೂ ಅರುಣಾ ಕುಮಾರಿ ಜೊತೆ ಕಾನ್ಫರೆನ್ಸ್ ಕರೆ ಹಾಕಿದ್ದರು.
ಉಮಾಪತಿಯೇ ಅರುಣಾ ಕುಮಾರಿಯನ್ನ ನನ್ನ ಬಳಿಗೆ ಕರೆದುಕೊಂಡು ಬಂದಿದ್ದು. ಈ ಅರುಣಾ ಕುಮಾರಿ ಪ್ರತಿಯೊಂದು ವಿಚಾರವನ್ನ ಸತ್ಯ ಎಂಬಂತೆ ನನ್ನ ಮುಂದೆ ವಿವರಣೆ ನೀಡಿದ್ದರು.
ನಾನು ರಾಕೇಶ್ ಕುಮಾರ್ಗೆ ಕರೆ ಮಾಡಿ ಅರುಣಾ ಕುಮಾರಿ ಜೊತೆ ಮಾತನಾಡುವಂತೆ ಹೇಳಿದೆ. ಆಕೆ ಅವರಿಗೂ ಸಂಪೂರ್ಣ ವಿವರಣೆ ನೀಡಿದರು.
ತೋಟ ನನ್ನ ಪತ್ನಿಯ ಹೆಸರಲ್ಲಿ ಇರೋದ್ರಿಂದ ನಾನು ಹೇಗೆ ಶ್ಯೂರಿಟಿ ನೀಡಲು ಸಾಧ್ಯ ಎಂದು ಅರುಣಾ ಕುಮಾರಯವರಲ್ಲಿ ಹೇಳಿದ್ದೆ. ಆದರೆ ಆಕೆ ತಾನು ತೋಟ ನೋಡಲೇಬೇಕೆಂದು ಹೇಳಿದರು.
ಆಕೆ ಹರ್ಷ, ಪತ್ನಿ ಊರ್ವಶಿ ಹೆಸರನ್ನೂ ಹೇಳಿದ್ದಳು. ಅರುಣಾ ಕುಮಾರಿ ಎಲ್ಲರ ಹೆಸರನ್ನ ಸಾರಾ ಸಾಗಾಟಾಗಿ ಹೇಳಿದ್ದರಿಂದ ನಾನೂ ಮೊದಲು ಆಕೆಯನ್ನ ನಂಬಿದ್ದೆ.
ರಾಕೇಶ್ ಹಾಗೂ ಹರ್ಷ ತೋಟಕ್ಕೆ ಬಂದಿದ್ದರು. ಹರ್ಷರನ್ನ ತೋಟದಲ್ಲಿ ನೋಡಿದ ಅರುಣಾ ಕುಮಾರಿ ಶಾಕ್ ಆಗಿದ್ದರು.
ಆಕೆಯ ಬಳಿ 2 ಸಿಮ್ ಇತ್ತು. ಇದರಲ್ಲಿ ಆಕೆಯ ಪತಿ ಕುಮಾರ್ ಎಂದು ತಿಳಿದಿದೆ. ಕುಮಾರ್ ಹಾಗೂ ಅರುಣಾ ಕುಮಾರಿ ಕಳೆದ 8 ವರ್ಷಗಳಿಂದ ದೂರವೇ ಇದ್ದಾರೆ.
ಆಕೆ ದ್ವಿತೀಯ ಪಿಯುಸಿ ಕೂಡ ಪಾಸ್ ಆಗಿಲ್ಲ. ಇನ್ನು ಮ್ಯಾನೇಜರ್ ಆಗೋಕೆ ಹೇಗೆ ಸಾಧ್ಯ ಎಂದು ಆಕೆಯ ಪತಿ ಕುಮಾರ್ ಹೇಳಿದ್ದಾರೆ.
ಕೂಡಲೇ ನಾವು ಉಮಾಪತಿ ಭೇಟಿ ಮಾಡಲು ಮುಂದಾದೆವು. ಅವರೇ ಅರುಣಾ ಕುಮಾರಿ ಭೇಟಿ ಮಾಡಿಸಿದ್ದರಿಂದ ನಮಗೂ ಸ್ಪಷ್ಟನೆ ಬೇಕಿತ್ತು.
ನಾನೇ ಉಮಾಪತಿಗೆ ಪ್ರಕರಣ ಸಂಬಂಧ ದೂರನ್ನ ನೀಡಲು ಹೇಳಿದ್ದೆ. ದೂರು ನೀಡಿದ ಬಳಿಕ ಅರುಣಾ ಕುಮಾರಿ ತಾವು ಸತ್ಯ ಹೇಳೋದಾಗಿ ಹೇಳಿದ್ದರು.
ಅಲ್ಲದೇ ಆಕೆ ಈ ಎಲ್ಲಾ ಪ್ರಕರಣಕ್ಕೆ ಉಮಾಪತಿಯೇ ಕಾರಣ ಎಂದು ಆಕೆ ಹೇಳಿದ್ದಾಳೆ ಎಂದು ನಟ ದರ್ಶನ್ ಹೇಳಿದ್ದಾರೆ.
ನಾನು ಈ ಪ್ರಕರಣದಲ್ಲಿ ಯಾರನ್ನೂ ದೂಷಿಸುತ್ತಿಲ್ಲ. ನಾನು ಅರುಣಾ ಕುಮಾರಿ ಹಾಗೂ ಉಮಾಪತಿಯನ್ನೇ ಮುಖಾಮುಖಿ ಮಾಡಿ ನಿಲ್ಲಿಸಿದ್ದೇನೆ.
ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ತಪ್ಪಿತಸ್ಥರು ಯಾರೆಂದು ತಿಳಿದರೆ ಅವರನ್ನ ಮಾತ್ರ ನಾನು ಸುಮ್ಮನೇ ಬಿಡೋದಿಲ್ಲ ಎಂದು ಹೇಳಿದ್ರು.