*ನಟ ದರ್ಶನ್, ಪವಿತ್ರಾಗೌಡ ಸೇರಿ ಹತ್ತು ಜನರ ಬಂಧನ*
*ಪವಿತ್ರಾಗೌಡಾಗೆ ಇನ್ಸ್ಟಾಗ್ರಾಂ ನಲ್ಲಿ ಅಶ್ಲೀಲ ಮೆಸೇಜ್ ಹಿನ್ನೆಲೆ*
*ಚಿತ್ರದುರ್ಗದ ರೇಣುಕಾ ಸ್ವಾಮಿ ಕಿಡ್ನಾಪ್, ಕೊಲೆ ಪ್ರಕರಣ*
ಬೆಂಗಳೂರು ಪ್ರಜಾಕಿರಣ.ಕಾಮ್ : ಜೂ. 11: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಕಾಮಾಕ್ಷಿ ಪಾಳ್ಯ ಠಾಣೆ ಪೊಲೀಸರು ಮಂಗಳವಾರ ನಟ ದರ್ಶನ್, ನಟಿ ಪವಿತ್ರಾಗೌಡ ಸೇರಿದಂತೆ ಹತ್ತು ಜನರನ್ನು ಬಂಧಿಸಿದ್ದಾರೆ ಎಂದು ಬೆಂಗಳೂರಿನ ಪೊಲೀಸ್ ಆಯುಕ್ತ ಬಿ. ದಯಾನಂದ ತಿಳಿಸಿದರು.
ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬುವರು ನಟಿ ಪವಿತ್ರಾ ಗೌಡಗೆ ಇನ್ಸ್ಟಾಗ್ರಾಂನಲ್ಲಿ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರನ್ನು ನಟ ದರ್ಶನ್ ಅಭಿಮಾನಿಗಳ ಸಂಘದ ಅಧ್ಯಕ್ಷ ವಿನಯ್ ಅವರನ್ನು ಕಿಡ್ನಾಪ್ ಮಾಡಿ ಬೆಂಗಳೂರಿಗೆ ಕರೆ ತಂದು ನಟ ದರ್ಶನ್ ಹಾಗೂ ಪವಿತ್ರಾಗೌಡ ಸಮ್ಮುಖದಲ್ಲಿ ಕೊಲೆ ಮಾಡಿ ಕಾಮಾಕ್ಷಿ ಪಾಳ್ಯದ ಮೋರಿಯಲ್ಲಿ ಎಸೆದು ಹೋಗಿದ್ದರು.
ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎನ್ನಲಾಗಿದ್ದು, ಅವರ ದೂರವಾಣಿ ಕರೆ ಆಧಾರದ ಮೇಲೆ ಇಂದು ಬೆಳಗ್ಗೆ ಮೈಸೂರಿನ ಫಾರ್ಮ ಹೌಸ್ ನಲ್ಲಿ ನಟ ದರ್ಶನ್ ಅವರನ್ನು ಅರೆಸ್ಟ್ ಮಾಡಲಾಗಿದೆ.
ದರ್ಶನ್ ಜೊತೆ ಪವಿತ್ರಾ ಗೌಡ ಆಪ್ತವಾಗಿದ್ದು, ದರ್ಶನ್ ಜೊತೆ ಇರೋ ಫೋಟೋಗಳನ್ನು ಪವಿತ್ರಾ ಗೌಡ ಹಂಚಿಕೊಂಡಿದ್ದರು.
ಅದಕ್ಕೆ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವವರು ಅಶ್ಲೀಲ ಮೇಸೆಜ್ ಮಾಡಿದ್ದರು.
ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿಯ ಕೊಲೆ ಮಾಡಿದ್ದು ನಟ ದರ್ಶನ್ ಸೂಚನೆ ಮೇಲೆ ಎಂದು ನಾಲ್ವರು ಆರೋಪಿಗಳು ಬಾಯ್ಬಿಟ್ಟಿದ್ದಾರೆ ಎಂದು ಪೊಲೀಸ್ ಆಯುಕ್ತ ದಯಾನಂದ ವಿವರಿಸಿದ್ದಾರೆ.
ಘಟನೆ ವೇಳೆ ಸ್ಥಳದಲ್ಲಿ ದರ್ಶನ್, ಪವಿತ್ರಾಗೌಡ ಕೂಡ ಇದ್ದರು ಎನ್ನಲಾಗಿದೆ. ಅದರ ಸಿಸಿ ಟಿವಿ ದೃಶ್ಯ, ತಾಂತ್ರಿಕ ಸಾಕ್ಷ್ಯ ಆಧಾರದ ಮೇಲೆ ಅವರನ್ನು ಬಂಧಿಸಲಾಗಿದೆ.
ಈ ಪ್ರಕರಣದಲ್ಲಿ ನಟ ದರ್ಶನ್ ಸೇರಿ ಇವರೆಗೆ 10 ಜನರನ್ನು ಬಂಧಿಸಿ ಸ್ಥಳ ಹಾಜರ್ ಗೆ ಕರೆ ತರುತ್ತಿದ್ದಾರೆ.