ಹುಬ್ಬಳ್ಳಿ prajakiran.com : ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಆದೇಶ ಹಾಗೂ ಕೊರೊನಾ ಹರಡುವಿಕೆ ನಿಯಂತ್ರಣ ಉದ್ದೇಶದಿಂದ ಸಾರ್ವಜನಿಕ ಹಿತದೃಷ್ಟಿಯಿಂದ ನಾಳೆ ಡಿ. 31 ರ ಬೆಳಿಗ್ಗೆ 11 ಗಂಟೆಯಿಂದ ನಾಳಿದ್ದು ಜ.01 ರ ರಾತ್ರಿ 12 ಗಂಟೆಯವರೆಗೆ ಹುಬ್ಬಳ್ಳಿಯ ನೃಪತುಂಗ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ಆದೇಶ ಹೊರಡಿಸಿದ್ದಾರೆ.
ಈ ಆದೇಶ ಉಲ್ಲಂಘಿಸುವವರ ವಿರುದ್ಧ ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆ 1897 ಹಾಗೂ ಕರ್ನಾಟಕ ಸಾಂಕ್ರಾಮಿಕ ರೋಗಗಳ ತಡೆ ಕೋವಿಡ್ 19 ನಿಯಂತ್ರಣ ಕಾಯ್ದೆ 2020 ರಡಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.